ಬ್ರೇಕಿಂಗ್ ನ್ಯೂಸ್
05-03-24 03:41 pm Mangalore Correspondent ಕರಾವಳಿ
ಉಳ್ಳಾಲ, ಮಾ.5: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿಯಲ್ಲಿ ಚಲಿಸುತ್ತಿದ್ದ ಸ್ಕೂಟರ್ಗೆ ಡಿಕ್ಕಿಯಾಗಿದ್ದು ಪರಿಣಾಮ ಸ್ಕೂಟರ್ ಸವಾರ ಡಿವೈಡರ್ಗೆ ಎಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಎದುರುಗಡೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ಸಂತೋಷ್ ಬೆಳ್ಚಾಡ ( 48) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿ. ಬಾಳೆಹಣ್ಣಿನ ವ್ಯಾಪಾರಿಯಾಗಿದ್ದ ಅವರು ವ್ಯಾಪಾರ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಥಾರ್ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬೆಲೆನೋ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ಎದುರಿನಲ್ಲಿ ತೆರಳುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ. ಸ್ಕೂಟರ್ ಹೆದ್ದಾರಿಯ ಡಿವೈಡರ್ ಗೆ ಬಡಿದ ಪರಿಣಾಮ ಸವಾರ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸೋ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಬಡ ಕುಟುಂಬದವರಾಗಿದ್ದು ತಂದೆ, ತಾಯಿ, ಪತ್ನಿ ಇಬ್ಬರು ಹೆಣ್ಮಕ್ಕಳ ಕುಟುಂಬದ ಆಧಾರ ಸ್ಥಂಬವಾಗಿದ್ದರು.






ಗಾಂಜಾ ನಶೆಯಿಂದ ಘಟನೆ, ಕಾಯಂ ಸಂಚಾರಿ ಪೊಲೀಸ್, ಬ್ಯಾರಿಕೇಡ್ ಅಳವಡಿಸಲು ಒತ್ತಾಯ ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಕೊಲ್ಯ ನಿವಾಸಿಗಳು ತಕ್ಷಣವೇ ಸ್ಥಳದಲ್ಲಿ ಕಾಯಂ ಸಂಚಾರಿ ಪೊಲೀಸರು, ಹೆದ್ದಾರಿಗೆ ಬ್ಯಾರಿಕೇಡ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇದೆ. ಪೊಲೀಸರು ಯಾವುದೇ ಕ್ರಮ ವಹಿಸುತ್ತಿಲ್ಲ. ಇಂದು ನಡೆದಿರುವ ಅಪಘಾತಕ್ಕೆ ಗಾಂಜಾ ನಶೆಯೇ ಕಾರಣ. ಜೀಪಿನಲ್ಲಿದ್ದ ಮೂವರು ಯುವಕರು ನಶೆಯಲ್ಲಿದ್ದ ಕಾರಣ ಘಟನೆ ನಡೆದಿದೆ. ತಕ್ಷಣವೇ ಮೂವರನ್ನು ತನಿಖೆಗೆ ಒಳಪಡಿಸಿ ಮೃತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಸ್ಥಳೀಯ ನಿವಾಸಿ ಶೇಖರ್ ಕನೀರುತೋಟ ಆಗ್ರಹಿಸಿದ್ದಾರೆ.
Mangalore accident, 48 year old man killed after jeep rams near Kolya Narayana Guru mandir. Youths who were drunk have said to rammed the two wheeler. The deceased has been identified as Santosh from Kolya kannirthota.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm