ಬ್ರೇಕಿಂಗ್ ನ್ಯೂಸ್
05-03-24 07:30 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.
ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವಾಗಲೇ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಏಳು ರಾಜ್ಯಗಳ 17 ಕಡೆಗಳಲ್ಲಿ ದಾಳಿ ನಡೆಸಿದ್ದರು. ಅದರಲ್ಲಿ ಕಡಬದ ಈ ದಾಳಿಯೂ ಒಂದಾಗಿದ್ದು, ಬೆಂಗಳೂರಿನ ಸ್ಫೋಟ ಘಟನೆಗೆ ಸಂಬಂಧ ಇದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಬೆಂಗಳೂರಿನ ಜೈಲಿನಲ್ಲಿರುವ ಲಷ್ಕರ್ ಉಗ್ರರಿಂದ ಪ್ರೇರಿತಗೊಂಡು ವಿಧ್ವಂಸಕ ದಾಳಿಗೆ ಐವರು ಆರೋಪಿಗಳು ಸಂಚು ಹೂಡಿದ್ದರು ಎನ್ನುವ ಕೇಂದ್ರೀಯ ಏಜನ್ಸಿಗಳ ಮಾಹಿತಿ ಆಧರಿಸಿ ಬೆಂಗಳೂರು ಪೊಲೀಸರು ಕಳೆದ ಜುಲೈ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆನಂತರ, ಪ್ರಕರಣ ಎನ್ಐಎಗೆ ಹಸ್ತಾಂತರ ಆಗಿತ್ತು.
Mangalore Kadaba Nia Raid, Biju Abraham arrested by NIA officers, taken to Bangalore. He has been arrested over giving shelter to terrorist to conduct terror activities in state of Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am