ಬ್ರೇಕಿಂಗ್ ನ್ಯೂಸ್
05-03-24 07:30 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.
ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಬೆಂಗಳೂರಿನ ರಾಮೇಶ್ವರ ಕೆಫೆ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವಾಗಲೇ ಎನ್ಐಎ ಅಧಿಕಾರಿಗಳು ಏಕಕಾಲದಲ್ಲಿ ಏಳು ರಾಜ್ಯಗಳ 17 ಕಡೆಗಳಲ್ಲಿ ದಾಳಿ ನಡೆಸಿದ್ದರು. ಅದರಲ್ಲಿ ಕಡಬದ ಈ ದಾಳಿಯೂ ಒಂದಾಗಿದ್ದು, ಬೆಂಗಳೂರಿನ ಸ್ಫೋಟ ಘಟನೆಗೆ ಸಂಬಂಧ ಇದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಬೆಂಗಳೂರಿನ ಜೈಲಿನಲ್ಲಿರುವ ಲಷ್ಕರ್ ಉಗ್ರರಿಂದ ಪ್ರೇರಿತಗೊಂಡು ವಿಧ್ವಂಸಕ ದಾಳಿಗೆ ಐವರು ಆರೋಪಿಗಳು ಸಂಚು ಹೂಡಿದ್ದರು ಎನ್ನುವ ಕೇಂದ್ರೀಯ ಏಜನ್ಸಿಗಳ ಮಾಹಿತಿ ಆಧರಿಸಿ ಬೆಂಗಳೂರು ಪೊಲೀಸರು ಕಳೆದ ಜುಲೈ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆನಂತರ, ಪ್ರಕರಣ ಎನ್ಐಎಗೆ ಹಸ್ತಾಂತರ ಆಗಿತ್ತು.
Mangalore Kadaba Nia Raid, Biju Abraham arrested by NIA officers, taken to Bangalore. He has been arrested over giving shelter to terrorist to conduct terror activities in state of Karnataka.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm