ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am