ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.
ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm