ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
07-05-26 03:10 pm
HK News Staffer
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
07-05-26 03:50 pm
HK News Staffer
ನಾವು ಸರ್ಕಾರ ರಚಿಸಲ್ಲ, ಟಿವಿಕೆ ಸರ್ಕಾರಕ್ಕಾಗಿ ಆರು...
07-05-26 12:52 pm
ವಿಜಯ್ ಪಕ್ಷಕ್ಕೆ ಕಾಂಗ್ರೆಸ್ ಬೇಷರತ್ ಬೆಂಬಲ ; ಲೋಕಸಭ...
06-05-26 11:02 pm
ಸಾಮಾನ್ಯ ಆಟೋ ಚಾಲಕನನ್ನು ಶಾಸಕನಾಗಿಸಿದ 'ದಳಪತಿ' ; ಎ...
05-05-26 10:30 pm
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
07-05-26 12:17 pm
HK News Staffer
ಬೆಂಗಳೂರಿನ ಇಸ್ರೋ ಕ್ಯಾಂಪಸ್ನಲ್ಲಿ ಭದ್ರತಾ ಆತಂಕ ;...
06-05-26 11:06 pm
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am
ಕಾರಿಗೆ ಬೆಂಕಿಯಿಟ್ಟು ಪ್ರಿಯತಮೆ ಕನ್ನಡ ಉಪನ್ಯಾಸಕಿಯನ...
06-05-26 10:44 am