ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am