ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm