ಬ್ರೇಕಿಂಗ್ ನ್ಯೂಸ್
09-03-24 06:16 pm Mangalore Correspondent ಕರಾವಳಿ
ಮಂಗಳೂರು, ಮಾ.9: ಕೆಲವು ಕ್ಷೇತ್ರಗಳಿಂದ ಕೆಲವು ಸಚಿವರು ಸ್ಪರ್ಧಿಸಿದರೆ ಲಾಭವಾಗುತ್ತೆ ಎನ್ನುವ ಅಭಿಪ್ರಾಯವನ್ನು ಕಾರ್ಯಕರ್ತರು, ಮುಖಂಡರು ವ್ಯಕ್ತಪಡಿಸಿದ್ದಾರೆ. ಯಾರು ಸ್ಪರ್ಧೆ ಮಾಡಬೇಕು ಅನ್ನೋದನ್ನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಸಂಪುಟದ ಸಚಿವರುಗಳು ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನುವ ನಿರ್ಧಾರದಲ್ಲಿ ಸಿಎಂ ಅವರೂ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಸಚಿವ ಕೃಷ್ಣ ಭೇರೇಗೌಡ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈಗಾಗಲೇ ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದೇನೆ. ಮೊದಲ ಬಾರಿ 2009 ರಲ್ಲಿ ನಾನು ಶಾಸಕನಾಗಿದ್ರೂ ಪಕ್ಷದ ಸೂಚನೆಯಂತೆ ಸ್ಪರ್ಧಿಸಿದ್ದೆ. ಆ ಸಂದರ್ಭದಲ್ಲಿ ಕೇವಲ ಪಕ್ಷದ ಸೂಚನೆ ಪಾಲಿಸಲು ಸ್ಪರ್ಧಿಸಿದ್ದೆ. 2019 ರ ಚುನಾವಣೆಯಲ್ಲೂ ಕೊನೆ ಕ್ಷಣದಲ್ಲಿ ಪಕ್ಷದ ಸೂಚನೆಗೆ ಗೌರವ ಕೊಟ್ಟು ಸ್ಪರ್ಧಿಸಿದ್ದೆ. ಎರಡು ಬಾರಿಯೂ ಚುನಾವಣೆಯಲ್ಲಿ ಸೋತಿದ್ದೇನೆ.
ಪಕ್ಷ ಹೇಳಿದಂತೆ ಎರಡು ಬಾರಿ ಸ್ಪರ್ಧಿಸಿದ್ದು ಕರ್ತವ್ಯ ನಿರ್ವಹಿಸಿದ್ದೇನೆ. ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಇಚ್ಛೆಯನ್ನು ಹೊಂದಿಲ್ಲ. ಈಗಾಗಲೇ ಪಕ್ಷದ ವರಿಷ್ಠರಿಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ವರಿಷ್ಠರೂ ಕೂಡ ನನ್ನ ಅಭಿಪ್ರಾಯಕ್ಕೆ ಗೌರವ ಕೊಟ್ಟಿದ್ದಾರೆ ಅಂತ ತಿಳಿದಿದ್ದೇನೆ. ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಎರಡೂ ಬಾರಿ ನನಗೆ ಮನಸಿಲ್ಲದಿದ್ದರೂ ಪಕ್ಷದ ಸೂಚನೆ ಮೇರೆಗೆ ಸ್ಪರ್ಧಿಸಿದ್ದೇನೆ. ಪದೇ ಪದೇ ಈ ರೀತಿ ಸೂಚನೆ, ಒತ್ತಡ ನೀಡುವುದು ಸೂಕ್ತವಲ್ಲ. ಈಗಾಗಲೇ ಎಐಸಿಸಿ ಪ್ರತಿನಿಧಿಗಳಿಗೂ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಎರಡು ಸಲ ಸ್ಪರ್ಧಿಸಿ ಪಕ್ಷಕ್ಕೆ ನನ್ನ ಋಣ ತೀರಿಸಿದ್ದೇನೆ ಎಂದು ಭೈರೇಗೌಡ ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಹಾಗು ಕೆಫೆ ಬಾಂಬ್ ಪ್ರಕರಣದ ತನಿಖೆಯ ಕುರಿತ ಪ್ರಶ್ನೆಗೆ, ಬಿಜೆಪಿಯವರು ಎಲ್ಲಾ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ಬಿಜೆಪಿಯವರು ಏನು ಹೇಳುತ್ತಾರೆ ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ವಾಸ್ತವಾಂಶದ ಆಧಾರದಲ್ಲಿ ಸರಕಾರ ಎಲ್ಲಾ ಕ್ರಮ ಕೈಗೊಳ್ಳುತ್ತದೆ. ಕಾನೂನು ವ್ಯವಸ್ಥೆ ಕಾಪಾಡಲು ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಈ ಘಟನೆಗಳು ಬಿಜೆಪಿಯವರಿಗೆ ಚುನಾವಣೆಯ ವಿಷಯವಾಗಿಸಬಹುದು. ಆದರೆ ನಮಗೆ ದೇಶದಲ್ಲಿ ಬೆಲೆ ಏರಿಕೆ, ನಿರುದ್ಯೋಗ, ಮುಂದಿನ ಚುನಾವಣೆಯ ವಿಷಯ. ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟು ಬಿಜೆಪಿ ಯವರು ಚುನಾವಣೆಗೆ ಹೋಗುತ್ತಾರೆ. ಸಮಾಜವನ್ನು ಒಡೆಯುತ್ತಾರೆ. ನಾವು ಹಾಗೆ ಮಾಡೋದಿಲ್ಲ ಎಂದರು.
Not contesting for Lok Sabha says Minister Krishna Bhairegowda in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am