ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am