ಬ್ರೇಕಿಂಗ್ ನ್ಯೂಸ್
11-03-24 03:29 pm Mangaluru Correspondent ಕರಾವಳಿ
ಬಂಟ್ವಾಳ, ಮಾ.11: ಆಟೋರಿಕ್ಷಾ ಓಡಿಸುತ್ತಿದ್ದಾಗ ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಸಿಟ್ಟಿನಲ್ಲಿ ಚಾಲಕನೊಬ್ಬ ಟ್ರಾಫಿಕ್ ಪೊಲೀಸರು ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಬಳಿಯ ಕೈಕಂಬದಲ್ಲಿ ನಡೆದಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ರಂಪಾಟ ನಡೆಸಿದ ಆರೋಪಿಯಾಗಿದ್ದು ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಮವಾರ ಬೆಳಗ್ಗೆ ಟ್ರಾಫಿಕ್ ಎಸ್ಐ ಸುತೇಶ್ ಅವರು ಕೈಕಂಬದಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ, ಖಾಕಿ ಸಮವಸ್ತ್ರ ಹಾಕದೆ ಮೊಬೈಲ್ ನಲ್ಲಿ ಮಾತನಾಡುತ್ತ ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿದ್ದಾರೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದ್ದಾರೆ.


ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿದ್ದಲ್ಲದೆ, ನನಗೆ ಇಂತಹ ರಿಕ್ಷಾನೇ ಬೇಡವೆಂದು ಹೇಳಿ ಪೆಟ್ರೋಲ್ ಹಚ್ಚಲು ಮುಂದಾಗಿದ್ದಾನೆ. ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟು ಹಾಕುವುದಾಗಿ ಬೆದರಿಸಿದ್ದಾನೆ. ನನ್ನ ರಿಕ್ಷಾ, ನಾನೇ ಬೆಂಕಿ ಕೊಡುತ್ತೇನೆ. ನೀವು ಯಾರು ಕೇಳೋಕೆ ಅಂತ ಪೊಲೀಸರನ್ನು ಪ್ರಶ್ನೆ ಮಾಡಿದ್ದಾನೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದು ಆತನಿಗೆ ಬುದ್ಧಿ ಹೇಳಿದ್ದಾರೆ. ಎಸ್.ಐ. ಸುತೇಶ್ ಅವರು ಆರೋಪಿ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
An auto driver tries to set his auto on fire after #police fine him for talking on the phone and not using his uniform while driving. An angry driver pours petrol into his auto and tries to set it on fire at #Bantwal in #Mangalore. #BreakingNews pic.twitter.com/ala5SeuIPd
— Headline Karnataka (@hknewsonline) March 11, 2024
An auto driver tries to set his auto on fire after police fine him for talking on the phone and not using his uniform while driving. An angry driver pours petrol into his auto and tries to set it on fire at Bantwal in Mangalore.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm