ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am