ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm