ಬ್ರೇಕಿಂಗ್ ನ್ಯೂಸ್
12-03-24 12:46 pm Mangalore Correspondent ಕರಾವಳಿ
ಮಂಗಳೂರು, ಮಾ.12: ಯಾರೇ ಅಭ್ಯರ್ಥಿ ಆದರೂ ಮೋದಿ ಮತ್ತೆ ಪ್ರಧಾನಿಯಾಗಬೇಕು, ಬಿಜೆಪಿ ಮತ್ತೆ ಗೆಲ್ಲಬೇಕು ಎಂಬುದು ನಮ್ಮೆಲ್ಲರ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗೆ ನಾವು ಬದ್ದರಾಗಿ ಕೆಲಸ ಮಾಡ್ತೇವೆ. ಪಾರ್ಟಿ ಏನು ಹೇಳುತ್ತೋ ಅದನ್ನ ನಾವು ಮಾಡ್ತೇವೆ. ಗುಡಿಸಿ ಅಂದ್ರೆ ಗುಡಿಸ್ತೇವೆ, ಒರೆಸಿ ಅಂದ್ರೆ ಒರೆಸ್ತೇವೆ.. ಹೀಗೆಂದು ಸಂಸದ ನಳಿನ್ ಕುಮಾರ್ ಭಾವುಕ ಮಾತುಗಳನ್ನಾಡಿದ್ದಾರೆ.
ಈ ಬಾರಿ ಪ್ರತಾಪಸಿಂಹ ಸೇರಿದಂತೆ ಕೆಲವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, ಸಂಸದ ನಳಿನ್ ಕುಮಾರ್ ಕಟೀಲ್ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸೋದು ನಮ್ಮ ಪಾರ್ಟಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಯೋಚನೆ ಮಾಡಿಕೊಂಡು ಸಂಸದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಮಾಡ್ತಾರೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರ್ತಾ ಇರಬೇಕು, ಸ್ವಾಗತಿಸ್ತೇನೆ ಎಂದು ಪರೋಕ್ಷವಾಗಿ ತನಗೂ ಟಿಕೆಟ್ ಸಿಗುತ್ತಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಪಕ್ಷದ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಅಧಿಕಾರ ಮುಖ್ಯ ಅಲ್ಲ, ರಾಷ್ಟ್ರೀಯ ನಾಯಕರ ಚಿಂತನೆ ಮುಖ್ಯ. ನಾನು ಸಾಮಾಜಿಕ ತಾಣಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಪಕ್ಷದ ನಿರ್ಧಾರಕ್ಕೆ ಬದ್ಧನಿದ್ದೇನೆ. ನಾವು ಅದನ್ನೇ ನಂಬಿ ಇದ್ದವರಲ್ಲ, ಸಂಘಟನೆ ಕಾರ್ಯವನ್ನು ನಂಬಿದವರು. ಕಾರ್ಯಕರ್ತರ ಆಧಾರದಲ್ಲಿ ಇದೆಲ್ಲಾ ಕಾರ್ಯಗಳು ಆಗುತ್ತೆ. ರಾಷ್ಟ್ರೀಯ ನಾಯಕರ ಯಾವ ತೀರ್ಮಾನಕ್ಕೂ ನಾವು ಬದ್ಧರಿದ್ದೇವೆ ಎಂದರು.
ನನಗೆ ಮೂರು ಬಾರಿ ಅವಕಾಶ ಕೊಡಲಾಗಿದೆ, 15 ವರ್ಷ ಕೆಲಸ ಮಾಡಿದ್ದೇನೆ. ಎಲ್ಲಿಯೂ ವ್ಯತ್ಯಾಸಗಳಿಲ್ಲ, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯಲ್ಲೂ ತುಳಿಯೋ ಕೆಲಸ ನಡೆಯಲ್ಲ, ಬೆಳೆಸೋ ಕೆಲಸ ಮಾಡ್ತಾರೆ ಎಂದು ಹೇಳಿದ ನಳಿನ್ ಕುಮಾರ್, ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ, ಸಂಘದ ವಿಚಾರ ಇಟ್ಟುಕೊಂಡಿದ್ದೆ. ಹಿರಿಯರು ಬಿಜೆಪಿ ಕೆಲಸ ಮಾಡು ಅಂತ ಹೇಳಿದ್ರು, ಲೋಕಸಭೆಗೆ ಅವಕಾಶ ಕೊಟ್ಟರು. ಸಾಮಾನ್ಯ ಕಾರ್ಯಕರ್ತನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೂಡ ಕೊಟ್ಟರು ಎಂದರು.
ಅವಕಾಶ ಸಿಕ್ಕಾಗ ನ್ಯಾಯ ಸಿಕ್ಕಿದೆ, ಸಿಗದೇ ಇದ್ದಾಗ ಅನ್ಯಾಯ ಆಗಿದೆ ಎನ್ನುವ ಹಕ್ಕು ನನಗಿಲ್ಲ. ಪಕ್ಷ ಎಲ್ಲರನ್ನೂ ಬೆಳೆಸಿದೆ, ಪಕ್ಷದ ಕೆಲಸಕ್ಕೆ ಜನ ಬೇಕಿದೆ. ಎಲ್ಲರಿಗೂ ಅಧಿಕಾರದ ಸ್ಥಾನ ಸಿಗಲ್ಲ. ಪಕ್ಷ ಹೇಳಿದರೆ ಯಾವ ಕೆಲಸ ಮಾಡೋದಕ್ಕೂ ರೆಡಿ ಇದ್ದೇನೆ ಎಂದರು. ಅಸಮಾಧಾನ ಇದೆಯಾ ಎಂಬ ಪ್ರಶ್ನೆಗೆ, ಅಸಮಾಧಾನ ಯಾಕೆ ಆಗಬೇಕು? ನಾವು ಮಾಡೋದು ಸಂಘಟನೆ ಕಾರ್ಯ. ನಮಗೆ ಅಸಮಾಧಾನ ಯಾವುದೇ ಸಂದರ್ಭದಲ್ಲಿ ಇರಲ್ಲ, ಅದು ಅಸಾಧ್ಯ ಎಂದು ಹೇಳಿದರು.
Mangalore MP Nalin Kateel says ready for anything, will respect BJP High command decision, he was quite emotional as he was speaking to media persons here in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am