ಬ್ರೇಕಿಂಗ್ ನ್ಯೂಸ್
12-03-24 04:59 pm Mangalore Correspondent ಕರಾವಳಿ
ಮಂಗಳೂರು, ಮಾ.12: ಟ್ರಸ್ಟ್ ಅಧೀನದ ಜಾಗಕ್ಕೆ ಬೇಲಿ ಹಾಕುವ ಸಂದರ್ಭ ಟ್ರಸ್ಟ್ ನ ಮಹಿಳಾ ಕಾರ್ಯದರ್ಶಿಗೆ ತಡೆಯೊಡ್ಡಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡದ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ, ಸರ್ವೆ ನಂ. 149 ರಲ್ಲಿ ಎರಡು ಎಕರೆ ಜಮೀನು ಮಂಜೂರಾಗಿರುತ್ತದೆ. ಜ.26 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟ್ರಸ್ಟ್ ಕಾರ್ಯದರ್ಶಿ ಲತಾ ರೈ ಅವರು ಸದಸ್ಯರಾದ ಡಾ.ಸಿ.ಎನ್.ಶಂಕರ್ ರಾವ್, ಪ್ರೊ.ಕೆ.ಎಂ.ಬಾಲಕೃಷ್ಣ, ಜಗದೀಶ್ ಕಾಪುಮಲೆ ಎಂಬವರೊಂದಿಗೆ ಟ್ರಸ್ಟ್ ನ ಜಾಗದ ಗಡಿಯಲ್ಲಿ, ಬೇಲಿ ಹಾಕಲು ಸೈಟ್ ಗೆ ತೆರಳಿದ್ದಾಗ ಸುಮಾರು 11 ಗಂಟೆಗೆ ಅಂದು ಕೊಣಾಜೆ ಠಾಣೆಯ ಜವಾಬ್ದಾರಿ ಹೊಂದಿದ್ದ ಉಳ್ಳಾಲದ ಪೊಲೀಸ್ ಠಾಣೆ ಇನ್ಸ್ಕ್ಟರ್ ಬಾಲಕೃಷ್ಣ ಎಚ್.ಎನ್ ಅವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಬಾಲಕೃಷ್ಣ ಅವರು ಸೈಟ್ನಲ್ಲಿದ್ದವರೆಲ್ಲರನ್ನೂ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಲತಾ ರೈ ಅವರು ಹೈಕೋರ್ಟ್ ಆದೇಶದ ಬಗ್ಗೆ ತಿಳಿಸಿದರೂ ಕೂಡ ಅದನ್ನು ಒಪ್ಪಿಕೊಳ್ಳದೇ ಸೈಟ್ನಲ್ಲಿ ಕೆಲಸಗಳನ್ನು ನಿಲ್ಲಿಸಲು ಇಲಾಖೆಯ ಮೇಲಾಧಿಕಾರಿಗಳ ಆದೇಶವಿದೆ ಎಂದು ಹೇಳಿದ ಪಿಐ ಬಾಲಕೃಷ್ಣ ಅವರು ಲತಾ ಅವರ ಕೈಗೆ ಹೊಡೆದು, ಕೈಯನ್ನು ಎಳೆದು ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಕಸಿದು ನೆಲಕ್ಕೆ ಹೊಡೆಯಲು ಯತ್ನಿಸಿದ್ದಾರೆ. ಈ ವೇಳೆ ಲತಾ ಅವರ ರಕ್ಷಣೆಗೆ ಬಂದ ಅಭಿಷೇಕ್ ಭಂಡಾರಿ ಎಂಬವರಿಗೂ ಇನ್ಸ್ ಪೆಕ್ಟರ್ ಥಳಿಸಿದ್ದು, ಘಟನೆಯನ್ನು ರೆಕಾರ್ಡ್ ಮಾಡುತ್ತಿದ್ದ ಅವರ ಫೋನ್ ಕಿತ್ತುಕೊಳ್ಳಲು ಯತ್ನಿಸಿ ತಳ್ಳಿದ್ದಾರೆಂದು ದೂರಲಾಗಿದೆ. ಏರು ಧ್ವನಿಯಲ್ಲಿ ಕಿರುಚಾಡಿದ ಬಾಲಕೃಷ್ಣ ಅವರು ಸ್ಥಳದಲ್ಲಿದ್ದವರೆಲ್ಲರನ್ನೂ ಬಂಧಿಸುವುದಾಗಿ ಬೆದರಿಸಿದ್ದಲ್ಲದೆ, ಪೊಲೀಸ್ ವ್ಯಾನ್ನಲ್ಲಿ ಹಾಕುವಂತೆ ಪೊಲೀಸ್ ಸಿಬ್ಬಂದಿಯವರಿಗೆ ಸೂಚಿಸಿದ್ದಾರೆಂದು ಲತಾ ರೈ ಅವರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಲತಾ ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.
A case has been filed at Konaje police station against Ullal police station officer H N Balakrishna. The accusation includes obstructing, assault, and threatening the life of a woman secretary of Nirmala Bharat Charitable Trust.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm