ಬ್ರೇಕಿಂಗ್ ನ್ಯೂಸ್
12-03-24 09:07 pm Mangalore Correspondent ಕರಾವಳಿ
ಮಂಗಳೂರು, ಮಾ.12: ರಾಜ್ಯದಲ್ಲಿ ಹೆಚ್ಚಿನೆಲ್ಲ ನಿಗಮಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದರೂ, ಕರಾವಳಿಯಲ್ಲಿ ತುಳುವರನ್ನು ಪ್ರತಿನಿಧಿಸುವ ತುಳು ಸಾಹಿತ್ಯ ಅಕಾಡೆಮಿಗೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ. ಇದೀಗ ಗುರುಪುರ ಬ್ಲಾಕ್ ಕಾಂಗ್ರೆಸಿನಲ್ಲಿ ಪ್ರಮುಖರಾಗಿದ್ದುಕೊಂಡು ಜಲ್ಲಿ ಕ್ರಶರ್ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬರನ್ನು ತುಳು ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಲಾಗುತ್ತೆ ಎನ್ನುವ ಮಾತು ಕೇಳಿಬಂದಿದ್ದು, ಈ ಬಗ್ಗೆ ತಿಳಿದ ತುಳು ಸಂಘಟನೆಯ ಪ್ರಮುಖರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾವು ತುಳು ಭಾಷೆ, ಸಂಸ್ಕೃತಿ, ಸಾಹಿತ್ಯ, ಸಂಶೋಧನೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ತುಳು ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷರ ನೇಮಕಾತಿ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಮಾನ ಕಂಡು ಆತಂಕಗೊಂಡಿದ್ದೇವೆ. ತುಳು ಭಾಷೆ, ಸಂಸ್ಕೃತಿಗೆ ಯಾವುದೇ ಕೊಡುಗೆ ನೀಡದ ವ್ಯಕ್ತಿಯನ್ನು ಅಕಾಡೆಮಿ ಅಧ್ಯಕ್ಷ ಪದವಿಗೆ ನೇಮಕ ಮಾಡುತ್ತಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಈ ರೀತಿಯ ಅನಪೇಕ್ಷಿತ ವ್ಯಕ್ತಿಯನ್ನು ನೇಮಕ ಮಾಡುವುದರಿಂದ ನಿಮ್ಮ ಸರಕಾರದ ಘನತೆಗೆ ಕುಂದು ಬರಲಿದೆ. ಭಾಷಾ ಅಕಾಡೆಮಿಗೆ ಆಯಾ ಕ್ಷೇತ್ರದ ಸಾಧಕರನ್ನು, ಅಧ್ಯಯನ ಆಸಕ್ತರನ್ನು, ಬರಹಗಾರರನ್ನು ನೇಮಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಮಂಗಳೂರಿನ ತುಳು ಸಂಘಟಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಕರಾವಳಿಗೆ ಸಂಬಂಧಪಟ್ಟ ಮೂಡಾ, ಗೇರು ಅಭಿವೃದ್ಧಿ ನಿಗಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸೇರಿ ಹಲವು ನಿಗಮಗಳಿಗೆ ಅಧ್ಯಕ್ಷರ ನೇಮಕ ಆಗಿತ್ತು. ಈ ಬಾರಿ ತುಳು ಅಕಾಡೆಮಿ ಅಧ್ಯಕ್ಷರಾಗುವುದಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಆಸಕ್ತಿ ಹೊಂದಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಯಾರನ್ನು ಶಿಫಾರಸು ಮಾಡುತ್ತೋ ಅವರನ್ನು ಆಯ್ಕೆ ಮಾಡುವುದು ವಾಡಿಕೆ. ಗುರುಪುರ ಬ್ಲಾಕ್ ಕಾಂಗ್ರೆಸಿನ ಪ್ರಮುಖರನ್ನು ಮಾಜಿ ಸಚಿವರೊಬ್ಬರು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದ್ದು, ತುಳು ಭಾಷೆಯ ಬಗ್ಗೆ ಗಂಧಗಾಳಿ ತಿಳಿದಿಲ್ಲದ ವ್ಯಕ್ತಿಯನ್ನು ಭಾಷಾ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದರೆ ಅಕಾಡೆಮಿಗೇನು ಪ್ರಯೋಜನ ಎಂದು ತುಳು ಸಾಹಿತ್ಯಾಸಕ್ತರು ಪ್ರಶ್ನೆ ಮಾಡಿದ್ದಾರೆ.
Mangalore Tulu academy president post still vacant, Tulu activist write letter to cm siddaramaiah.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm