ಬ್ರೇಕಿಂಗ್ ನ್ಯೂಸ್
27-11-20 07:32 pm Udupi Reporter ಕರಾವಳಿ
ಉಡುಪಿ, ನವೆಂಬರ್ 27: ರಾಷ್ಟ್ರ ವಿರೋಧಿ ಬರಹ ಹಾಗೂ ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದರೂ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ಉಗ್ರ ಸಂಘಟನೆಯನ್ನು ಬೆಂಬಲಿಸುವ ಗೋಡೆ ಬರಹ ಬರೆದಿರುವ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ರಾಷ್ಟ್ರ ವಿರೋಧಿ ಘೋಷಣೆ ಹಾಕಿದವರ ವಿರುದ್ಧ ನಮ್ಮ ಸರಕಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ದೇಶದ ಬೇರೆ ಬೇರೆ ಕಡೆಗಳಲ್ಲಿ ಲವ್ ಜಿಹಾದ್ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷ ಮತ್ತು ಪಕ್ಷದ ಕೋರ್ ಕಮಿಟಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ, ಸಿಎಂ ಒಪ್ಪಿಗೆ ನೀಡಿದ್ದಾರೆ. ಕರ್ನಾಟಕದಲ್ಲೂ ಲವ್ ಜಿಹಾದ್ ಮಾಡಿದವರ ಬಗ್ಗೆ ಕಠಿಣ ಕ್ರಮವನ್ನು ಸರಕಾರ ತೆಗೆದುಕೊಳ್ಳಲಿದೆ ಎಂದರು.
ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ನಳಿನ್ ಕುಮಾರ್ ಕಟಿಲ್, ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಅವರು ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ:
ಮಂತ್ರಿಗಳು ಸಚಿವ ಸ್ಥಾನಕ್ಕೆ ಲಾಬಿ ಮಾಡಲು ದೆಹಲಿಗೆ ಹೋಗಿದ್ದಾರಾ ಎಂಬ ಪತ್ರಕರ್ತರ ಪ್ರಶ್ನೆಗೆ, ಕೇಂದ್ರದ ಅನುದಾನ ತರುವುದಕ್ಕೆ ಮಂತ್ರಿಗಳು ದೆಹಲಿಗೆ ಹೋಗುತ್ತಾರೆ. ಹೋದಾಗ ಕೇಂದ್ರ ನಾಯಕರ ಭೇಟಿ ಆಗುವುದು ಸಹಜ ಎಂದು ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಸಿಬಿಐ ತನಿಖೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಕೆಶಿಯವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿಲ್ಲ, ಇದು ತಪ್ಪು. ಸಿಬಿಐ ಎಲ್ಲರ ಜೊತೆಗೂ ಸಮಾನವಾಗಿ ಕೆಲಸ ಮಾಡುತ್ತದೆ. ಕಾಂಗ್ರೆಸ್ ಸರಕಾರ ಕೂಡಾ ಹಲವಾರು ಜನರ ತನಿಖೆ ಮಾಡಿದೆ. ಹಾಗಾದರೆ, ಕಾಂಗ್ರೆಸ್ ಪಕ್ಷ ಸಿಬಿಐಯನ್ನು ದುರುಪಯೋಗಪಡಿಸಿಕೊಂಡಿತ್ತು ಎಂದು ಕೇಳಬೇಕಾಗುತ್ತದೆ ಎಂದಿದ್ದಾರೆ.
In an incident reported from the Bejai area in the city, miscreants have reportedly written “Lashkar Zindabad” on the wall of a appartment comound for which BJP President has ordered for strict action against the culprits.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm