ಬ್ರೇಕಿಂಗ್ ನ್ಯೂಸ್
16-03-24 12:52 pm Mangalore Correspondent ಕರಾವಳಿ
ಮಂಗಳೂರು, ಮಾ.16: ಅರುಣ್ ಪುತ್ತಿಲ ಅವರು ಪಕ್ಷದ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮತ್ತೆ ಸೇರ್ಪಡೆ ಎನ್ನುವ ವಿಚಾರವೇ ಬರುವುದಿಲ್ಲ. ಆ ವಿಚಾರದಲ್ಲಿ ಪುತ್ತೂರಿನ ಕಾರ್ಯಕರ್ತರಲ್ಲಿ ಗೊಂದಲ ಆಗಿರುವುದು ಸತ್ಯ. ಅದನ್ನು ನಾವು ಸರಿಪಡಿಸುತ್ತೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದಲ್ಲಿ ಪಕ್ಷದ ಚುನಾವಣಾ ಕಚೇರಿಯಲ್ಲಿ ಸತೀಶ್ ಕುಂಪಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ಪುತ್ತಿಲ ಸೇರ್ಪಡೆ ಎನ್ನುವಂಥ ವಿಚಾರದಲ್ಲಿ ನಮ್ಮಲ್ಲಿ ಗೊಂದಲ ಇಲ್ಲ. ಅದೆಲ್ಲ ಮುಗಿದ ಪ್ರಕ್ರಿಯೆ. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷ ಸೇರ್ಪಡೆಯಾಗಿದ್ದಾರೆ. ಅರುಣ್ ಪುತ್ತಿಲ ಅವರೇ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು, ಆ ನಿಟ್ಟಿನಲ್ಲಿ ಬೇಷರತ್ತಾಗಿ ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಈಗ ಪುತ್ತಿಲ ಅವರಿಗೂ ಸ್ಪಷ್ಟ ಇದೆ, ಪಕ್ಷ ಸೇರ್ಪಡೆ ವಿಚಾರದಲ್ಲಿ ಗೊಂದಲ ಅನ್ನುವುದು ಉದ್ಭವಿಸುವುದಿಲ್ಲ ಎಂದಿದ್ದಾರೆ.
ಪುತ್ತೂರಿನಲ್ಲಿ ಕೆಲವು ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದು, ಆ ಬಗ್ಗೆ ಅವರಲ್ಲಿ ಮಾತುಕತೆ ನಡೆಸಿದ್ದೇನೆ. ಜಿಲ್ಲಾಧ್ಯಕ್ಷನಾಗಿ ಕಾರ್ಯಕರ್ತರ ಭಾವನೆಗಳನ್ನು ತಿಳಿಯುವುದು, ಗೊಂದಲ ಬಗೆಹರಿಸುವುದು ನನ್ನ ಕರ್ತವ್ಯ. ಅವರಲ್ಲಿನ ಗೊಂದಲವನ್ನು ಸರಿಪಡಿಸುತ್ತೇನೆ. ಪಕ್ಷ ಸೇರ್ಪಡೆ ಎನ್ನುವ ವಿಚಾರದಲ್ಲಿ ನಮ್ಮಲ್ಲಿ ಗೊಂದಲ ಇಲ್ಲ. ಪುತ್ತಿಲ ಪರಿವಾರ ವಿಸರ್ಜನೆ ಮಾಡಿಕೊಂಡೇ ಪಕ್ಷದ ಜೊತೆಗಿರುತ್ತಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಆಗಿದೆ, ಅದನ್ನು ಸರಿಪಡಿಸುವ ಕೆಲಸ ಆಗಿದೆ. ಸಣ್ಣ ಗೊಂದಲ ಇರುವುದು ಸಹಜ. ಪುತ್ತಿಲ ಪಕ್ಷಕ್ಕೆ ಬರಬಾರದು ಅಂತ ಯಾರೂ ಹೇಳಿಲ್ಲ. ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆಸಿ ಪಕ್ಷ ಸೇರಿದ ಬಳಿಕ ಮತ್ತೆ ಧ್ವಜ ಕೊಟ್ಟು ಸ್ವಾಗತಿಸಬೇಕೆಂದು ಇಲ್ಲ. ರಾಜ್ಯಾಧ್ಯಕ್ಷರ ಸೂಚನೆಯೇ ನಮಗೆ ಅಂತಿಮ ಎಂದು ಸತೀಶ್ ಕುಂಪಲ ಹೇಳಿದ್ದಾರೆ.
ಅರುಣ್ ಪುತ್ತಿಲ ಪಕ್ಷ ಸೇರ್ಪಡೆ ವಿಚಾರದಲ್ಲಿ ಪುತ್ತೂರಿನ ಒಂದಷ್ಟು ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬಾಗಿಲು ಹಾಕಿ ಜಿಲ್ಲಾಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದರು. ಬಾಗಿಲು ಹಾಕಿ ಚರ್ಚೆ ನಡೆಸಿದ್ದು ತಪ್ಪು ಅಭಿಪ್ರಾಯಕ್ಕೆ ಕಾರಣವಾಗಿತ್ತು. ಅರುಣ್ ಪುತ್ತಿಲ ಪಕ್ಷ ಸೇರ್ಪಡೆಗೆ ಕಾರ್ಯಕರ್ತರ ವಿರೋಧ ಎನ್ನುವಂತೆ ಸಂದೇಶ ರವಾನೆಯಾಗಿತ್ತು. ರಾತ್ರಿ 8.30ರ ವೇಳೆಗೆ ಪಕ್ಷದ ಕಚೇರಿಯಿಂದ ಹೊರಬಂದಿದ್ದ ಸತೀಶ್ ಕುಂಪಲ, ಪುತ್ತಿಲ ಪಕ್ಷ ಸೇರ್ಪಡೆ ಕುರಿತ ಪ್ರಶ್ನೆಗೆ ಗೊಂದಲ ನೀವು ಮಾಧ್ಯಮದವರು ಸೃಷ್ಟಿಸಿದ್ದು ಎಂದು ಹೇಳಿ ಹೊರನಡೆದಿದ್ದರು. ಇದರಿಂದಾಗಿ ಪುತ್ತಿಲ ಪರಿವಾರದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಲ್ಲದೆ, ಜಾಲತಾಣದಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಬೇಕೆಂದು ಒತ್ತಾಯ ಮಾಡಿದ್ದರು.
Arun Puttila met the party's state president and joined the party. There is no question of re-joining. It is true that there is confusion among the activists of Puttur on that issue. We will fix it," bjp district president Satish Kumpala said.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am