ಬ್ರೇಕಿಂಗ್ ನ್ಯೂಸ್
17-03-24 05:20 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೋದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಬೇಕು. ಪಕ್ಷದ ಸೂಚನೆಯನ್ನು ಯಥಾವತ್ ಪಾಲಿಸಿ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವೆಲ್ಲ ಹೊತ್ತುಕೊಳ್ಳಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡಿದ್ದು ಅಸೆಂಬ್ಲಿ ಚುನಾವಣೆಯ ಜಟಾಪಟಿ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾವೆಲ್ಲ ಅದನ್ನು ಒಪ್ಪಿಕೊಳ್ಳುತ್ತೇವೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ ಆ ನೋವುಗಳನ್ನು ನಾವೆಲ್ಲ ಇವತ್ತು ಮರೆತಿದ್ದೇವೆ. ನಾವೆಲ್ಲ ಅಣ್ಣ ತಮ್ಮಂದಿರ ಮತ್ತು ಅಕ್ಕ ತಂಗಿಯರ ರೀತಿಯಲ್ಲಿ ಮುಂದಿನ ದಿನ ಪಕ್ಷಕ್ಕಾಗಿ ಕೆಲಸ ಮಾಡಲು ಬದ್ಧರಿದ್ದೇವೆ. ಪಕ್ಷದ ಸೂಚನೆಯನ್ನು ಪಾಲಿಸಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಮಾಡಲಿದ್ದೇವೆ ಎಂದರು.
ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತು ಸೋಲೋದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ. ಈ ಕ್ಷಣದಿಂದಲೇ ನಾವೆಲ್ಲ ಪಕ್ಷ ಕೊಟ್ಟಿರುವ ಕೆಲಸವನ್ನು ನಿರ್ವಹಿಸಿಕೊಂಡು ನಾಳಿನ ದಿನ ಚುನಾವಣೆಯಲ್ಲಿ ಬ್ರಿಜೇಶ್ ಚೌಟ ಅವರನ್ನು ನಾಲ್ಕು ಲಕ್ಷ ಅಧಿಕ ಮತಗಳಿಂದ ಗೆಲ್ಲಿಸುವ ಯೋಚನೆ ಕಾರ್ಯಕರ್ತರು ಮಾಡಿದರೆ ಯಾವುದೇ ಕಾರ್ಯ ಕಷ್ಟವಾಗುವುದಿಲ್ಲ ಎಂದರು. ಇವತ್ತು ಸಾಮಾಜಿಕ ಜಾಲತಾಣ ಬಹಳ ಪ್ರಬಲವಾಗಿದೆ. ಹಾಗಾಗಿ ಪಕ್ಷದ ವಿಚಾರದಲ್ಲಿ ನಮ್ಮ ಸಂಘ, ನಾಯಕರ ವಿರುದ್ಧ ಯಾರು ಕೂಡ ವೈಯುಕ್ತಿಕ ವಿಚಾರ ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶ ರವಾನಿಸಬಾರದು. ಸಾಮಾಜಿಕ ಜಾಲತಾಣದ ವಿಷಯ ಬಿಟ್ಟು ನಾವೆಲ್ಲ ನಮ್ಮ ಬೂತ್ ನಲ್ಲಿ ಕಾರ್ಯ ಮಾಡಬೇಕು ಎಂದರು.
Puttur Arun Puthila to BJP, BJP will never lose in Puttur. He said I am back to BJP so let's forget all the past and concentrate on the upcoming Elections.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm