ಬ್ರೇಕಿಂಗ್ ನ್ಯೂಸ್
18-03-24 11:05 am Mangalore Correspondent ಕರಾವಳಿ
ಉಳ್ಳಾಲ, ಮಾ.18: ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ತಲಪಾಡಿಯಲ್ಲಿ ನಡೆದಿದೆ.
ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಮೃತ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದ್ದು, ಎದುರು ಭಾಗದ ಹೆದ್ದಾರಿ ಬದಿಯಲ್ಲೇ ಮನೆ ಹೊಂದಿದ್ದಾರೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಹಿನ್ನೆಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನ ಉಪಚರಿಸಿ ಮಧ್ಯಾಹ್ನ ವೇಳೆ ಬೇಕರಿಗೆ ತೆರಳುತ್ತಿದ್ದರು. ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಧಾವಿಸಿ ಬಂದಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಮೃತ ರಾಜೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಹಿರಿಯ ಮಗಳು ಪದವಿ ಶಿಕ್ಷಣ ಪಡೆಯುತ್ತಿದ್ದು, ಕಿರಿಯ ಮಗಳು ಎಸ್ಸೆಸೆಲ್ಸಿ ಓದುತ್ತಿದ್ದಾರೆ. ಈಕೆ ಇದೇ ಮಾ.25 ರಂದು ನಡೆಯಲಿರುವ ಬೋರ್ಡ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು. ರಾಜೇಶ್ ಅವರ ಅಕಾಲಿಕ ಸಾವಿನಿಂದ ಪತ್ನಿ , ಮಕ್ಕಳು ಆಘಾತಕ್ಕೊಳಗಾಗಿದ್ದಾರೆ.
ಮೃತ ರಾಜೇಶ್ ತಲಪಾಡಿ ವೀರಾಂಜನೇಯ ವ್ಯಾಯಾಮ ಶಾಲೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನೆಗೆ ಕಾರಣನಾದ ಬೈಕ್ ಸವಾರ ಮಹಮ್ಮದ್ ಸೊಹೈಲ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Talapady Accident, 49 year old man dies after bike rams over pedestrian. The deceased has been identified as Rajesh Shetty.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am