ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm