ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.


ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm