ಬ್ರೇಕಿಂಗ್ ನ್ಯೂಸ್
18-03-24 02:55 pm Mangalore Correspondent ಕರಾವಳಿ
ಮಂಗಳೂರು, ಮಾ.18: ದಕ್ಷಿಣ ಕನ್ನಡ – ಕೊಡಗು ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕೂಂಬಿಂಗ್ ಆರಂಭಿಸಿದ್ದಾರೆ.
ಸುಳ್ಯ ತಾಲೂಕಿನ ಕಡಮಕಲ್, ಕೂಜಿಮಲೆ, ಉಪ್ಪುಕಳ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ಎಎನ್ಎಫ್ ಪಡೆಗಳು ಕಾಡಂಚಿನ ಗ್ರಾಮಗಳಲ್ಲಿ ಸಂಚಾರ ನಡೆಸಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿಭಾಗದಲ್ಲಿ ಪೊಲೀಸರ್ ಅಲರ್ಟ್ ಆಗಿದ್ದಾರೆ.
ಕೆಲವು ದಿನಗಳ ಹಿಂದೆ ಕಡಮಕಲ್ ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆನಂತರ, ಕೂಜಿಮಲೆ ಮತ್ತು ಕಲ್ಮಕಾರ್ ಗ್ರಾಮದಲ್ಲಿ ರಸ್ತೆಗೆ ಬಂದಿದ್ದ ಎಂಟು ಮಂದಿಯಿದ್ದ ನಕ್ಸಲರು ಅಲ್ಲಿ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ನಕ್ಸಲರು ಈ ವೇಳೆ ಶಸ್ತ್ರಸಜ್ಜಿತರಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಕ್ಸಲರ ಪತ್ತೆಗಾಗಿ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ಪಡೆಯ ಸಿಬಂದಿ ದಿಢೀರ್ ಆಗಿ ಕಡಮಕಲ್ ಎಸ್ಟೇಟ್ ಪರಿಸರಕ್ಕೆ ಬಂದಿದ್ದು ಶೋಧ ಕಾರ್ಯಾಚರಣೆ ನಡೆಸಿದೆ.
ಇತ್ತೀಚೆಗಷ್ಟೇ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಅಮಾಸೆಬೈಲು ಭಾಗದಲ್ಲಿ ನಕ್ಸಲರು ಕಾಣಿಸಿದ್ದ ಬಗ್ಗೆ ಸ್ಥಳೀಯರು ಪೊಲೀಸರ ಗಮನಕ್ಕೆ ಬಂದಿದ್ದರು. ಆನಂತರ, ಅಲ್ಲಿಯೂ ಎಎನ್ಎಫ್ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಆದರೆ, ನಕ್ಸಲರು ಅವರಿಗೆ ಸಿಕ್ಕಿರಲಿಲ್ಲ. ಅಲ್ಲಿದ್ದವರೇ ಈಗ ದಕ್ಷಿಣ ಕನ್ನಡದ ಮೂಲಕ ಕೊಡಗಿನತ್ತ ಚಲಿಸುತ್ತಿದ್ದಾರೆಯೇ ಎನ್ನುವ ಶಂಕೆ ಎದುರಾಗಿದೆ.
Mangalore Naxal combing operations at Sullia after residents see naxal moment.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm