ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm