ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm