ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್ಮೆಂಟ್ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am