ಬ್ರೇಕಿಂಗ್ ನ್ಯೂಸ್
19-03-24 10:15 pm Mangalore Correspondent ಕರಾವಳಿ
ಮಂಗಳೂರು, ಮಾ.19: ಇತ್ತೀಚೆಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಜಯಾನಂದ ಕೆ. ಬಂಗೇರ ಅವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರವರು ಜಯಾನಂದ ಬಂಗೇರ ಅವರ ಮನೆಗೆ ಭೇಟಿ ನೀಡಿದರು. ಬಿಜೆಪಿ ಪಕ್ಷವು ಸದಾ ನಿಮ್ಮ ಜೊತೆ ಇದೆ ಎಂದು ಹೇಳಿ ಧೈರ್ಯ ತುಂಬಿದರು.
ಘಟನೆಯನ್ನು ಖಂಡಿಸಿ ವ್ಯಕ್ತಪಡಿಸಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಧೈರ್ಯವಾಗಿ ಪ್ರಶ್ನಿಸು ಅಂತ ಶಾಲೆಗಳಲ್ಲಿರುವ ಧ್ಯೇಯ ವಾಕ್ಯಗಳನ್ನು ಕಾಂಗ್ರೆಸ್ ಸರಕಾರವೇ ಬದಲಾಯಿಸಿತ್ತು. ಆದರೆ ಅದೇ ಪುತ್ತೂರಿನ ಶಾಸಕ ಅಶೋಕ ರೈ ಅವರೇ ಹೇಳಿದ ಸುಳ್ಳನ್ನು ದ.ಕ. ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸದಸ್ಯ ಜಯಾನಂದ ಬಂಗೇರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಕ್ಕೆ ಉತ್ತರ ಕೊಡಲಾಗದ ಹೇಡಿ ಕಾಂಗ್ರೆಸ್ ಶಾಸಕ ತನ್ನ ಬೆಂಬಲಿಗರನ್ನು ಜಯಾನಂದ ಅವರ ಮನೆಗೆ ಚಂಡೆ ಬಳಗ ಹಾಗೂ ಬ್ಯಾನರ್ ಹಿಡಿದುಕೊಂಡು ಅಕ್ರಮವಾಗಿ ಕಳುಹಿಸಿ ಜಯಾನಂದ ಅವರ ಹೆಂಡತಿ ಮಕ್ಕಳು ವಯೋವೃದ್ದರನ್ನು ಬೆದರಿಸುವ ಹಾಗೂ ವಸತಿ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುವ ಮುಖೇನ ಹೇಯ ದುರ್ವರ್ತನೆ ತೋರಿದ್ದಾರೆ.

ಕಾಂಗ್ರೆಸ್ ನಡೆಯನ್ನು ದಕ್ಷಿಣ ಕನ್ನಡ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ. ಹಾಗೂ ಅಲ್ಲಿ ಚುನಾವಣಾ ನೀತಿ ಸಂಹಿತೆ ಚಾಲ್ತಿಯಲ್ಲಿ ಇರುವಾಗ ಚಂಡೆ ಹಾಗೂ ಬ್ಯಾನರ್ ಅನ್ನು ಚುನಾವಣಾ ಆಯೋಗದ ಅನುಮತಿ ಇಲ್ಲದೇ ಮೆರವಣಿಗೆ ಮೂಲಕ ಬಂದಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿದೆ. ಆದ್ದರಿಂದ ಚುನಾವಣಾ ಆಯೋಗವು ಅಲ್ಲಿ ಬಂದಿದ್ದ ಚಂಡೆ, ವಾಹನ ಹಾಗೂ ಸಾಹಿತ್ಯಗಳನ್ನು ಮುಟ್ಟುಗೋಲು ಹಾಕಬೇಕು ಹಾಗೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರೊಂದಿಗೆ ಗೋಪಾಲಕೃಷ್ಣ ಹೇರಳೆ, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ನಿತಿನ್ ಕುಮಾರ್, ಆರ್.ಸಿ. ನಾರಾಯಣ, ಶ್ರೀಮತಿ ವಿದ್ಯಾಗೌರಿ, ಸಹಜ್ ರೈ, ಯುವರಾಜ್ ಪೆರಿಯತ್ತೋಡಿ, ನಿತೇಶ್ ಕುಂಬ್ರ, ಅಶೋಕ್ ಹಾರಾಡಿ ಹಾಗೂ ಪಕ್ಷದ ಮುಖಂಡರು, ಪುತ್ತೂರು ಮಂಡಲದ ಪ್ರಮುಖರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
Puttur banner row, assult on BJP member by congress, BJP leaders visit house, election commision takes action for violating election code of conduct.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm