ಬ್ರೇಕಿಂಗ್ ನ್ಯೂಸ್
19-03-24 10:15 pm Mangalore Correspondent ಕರಾವಳಿ
ಮಂಗಳೂರು, ಮಾ.19: ಇತ್ತೀಚೆಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಜಯಾನಂದ ಕೆ. ಬಂಗೇರ ಅವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರವರು ಜಯಾನಂದ ಬಂಗೇರ ಅವರ ಮನೆಗೆ ಭೇಟಿ ನೀಡಿದರು. ಬಿಜೆಪಿ ಪಕ್ಷವು ಸದಾ ನಿಮ್ಮ ಜೊತೆ ಇದೆ ಎಂದು ಹೇಳಿ ಧೈರ್ಯ ತುಂಬಿದರು.
ಘಟನೆಯನ್ನು ಖಂಡಿಸಿ ವ್ಯಕ್ತಪಡಿಸಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಧೈರ್ಯವಾಗಿ ಪ್ರಶ್ನಿಸು ಅಂತ ಶಾಲೆಗಳಲ್ಲಿರುವ ಧ್ಯೇಯ ವಾಕ್ಯಗಳನ್ನು ಕಾಂಗ್ರೆಸ್ ಸರಕಾರವೇ ಬದಲಾಯಿಸಿತ್ತು. ಆದರೆ ಅದೇ ಪುತ್ತೂರಿನ ಶಾಸಕ ಅಶೋಕ ರೈ ಅವರೇ ಹೇಳಿದ ಸುಳ್ಳನ್ನು ದ.ಕ. ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸದಸ್ಯ ಜಯಾನಂದ ಬಂಗೇರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಕ್ಕೆ ಉತ್ತರ ಕೊಡಲಾಗದ ಹೇಡಿ ಕಾಂಗ್ರೆಸ್ ಶಾಸಕ ತನ್ನ ಬೆಂಬಲಿಗರನ್ನು ಜಯಾನಂದ ಅವರ ಮನೆಗೆ ಚಂಡೆ ಬಳಗ ಹಾಗೂ ಬ್ಯಾನರ್ ಹಿಡಿದುಕೊಂಡು ಅಕ್ರಮವಾಗಿ ಕಳುಹಿಸಿ ಜಯಾನಂದ ಅವರ ಹೆಂಡತಿ ಮಕ್ಕಳು ವಯೋವೃದ್ದರನ್ನು ಬೆದರಿಸುವ ಹಾಗೂ ವಸತಿ ಪ್ರದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುವ ಮುಖೇನ ಹೇಯ ದುರ್ವರ್ತನೆ ತೋರಿದ್ದಾರೆ.

ಕಾಂಗ್ರೆಸ್ ನಡೆಯನ್ನು ದಕ್ಷಿಣ ಕನ್ನಡ ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ. ಹಾಗೂ ಅಲ್ಲಿ ಚುನಾವಣಾ ನೀತಿ ಸಂಹಿತೆ ಚಾಲ್ತಿಯಲ್ಲಿ ಇರುವಾಗ ಚಂಡೆ ಹಾಗೂ ಬ್ಯಾನರ್ ಅನ್ನು ಚುನಾವಣಾ ಆಯೋಗದ ಅನುಮತಿ ಇಲ್ಲದೇ ಮೆರವಣಿಗೆ ಮೂಲಕ ಬಂದಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿದೆ. ಆದ್ದರಿಂದ ಚುನಾವಣಾ ಆಯೋಗವು ಅಲ್ಲಿ ಬಂದಿದ್ದ ಚಂಡೆ, ವಾಹನ ಹಾಗೂ ಸಾಹಿತ್ಯಗಳನ್ನು ಮುಟ್ಟುಗೋಲು ಹಾಕಬೇಕು ಹಾಗೂ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರೊಂದಿಗೆ ಗೋಪಾಲಕೃಷ್ಣ ಹೇರಳೆ, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ನಿತಿನ್ ಕುಮಾರ್, ಆರ್.ಸಿ. ನಾರಾಯಣ, ಶ್ರೀಮತಿ ವಿದ್ಯಾಗೌರಿ, ಸಹಜ್ ರೈ, ಯುವರಾಜ್ ಪೆರಿಯತ್ತೋಡಿ, ನಿತೇಶ್ ಕುಂಬ್ರ, ಅಶೋಕ್ ಹಾರಾಡಿ ಹಾಗೂ ಪಕ್ಷದ ಮುಖಂಡರು, ಪುತ್ತೂರು ಮಂಡಲದ ಪ್ರಮುಖರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
Puttur banner row, assult on BJP member by congress, BJP leaders visit house, election commision takes action for violating election code of conduct.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm