ಬ್ರೇಕಿಂಗ್ ನ್ಯೂಸ್
20-03-24 11:09 am Mangalore Correspondent ಕರಾವಳಿ
ಮಂಗಳೂರು, ಮಾ.20: ಮಂಗಳೂರಿನಿಂದ ಸರಕು ಹೇರಿಕೊಂಡು ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ಹಡಗು ಸಮುದ್ರ ಮಧ್ಯೆ ತಾಂತ್ರಿಕ ತೊಂದರೆಯಿಂದ ಮುಳುಗಡೆಯಾಗಿದ್ದು, ಅದರಲ್ಲಿದ್ದ ಎಂಟು ಮಂದಿ ಸಿಬಂದಿ ಸಮುದ್ರದಲ್ಲಿ ಮೂರು ದಿನಗಳ ಕಾಲ ಅನ್ನ, ನೀರಿಲ್ಲದೆ ಕಳೆದು ಪವಾಡ ಸದೃಶ ಪಾರಾಗಿದ್ದಾರೆ.
ಮಾ.12ರಂದು ತಮಿಳುನಾಡು ಮೂಲದ ಎಂಎಸ್ ವಿ ವರದರಾಜ ಹೆಸರಿನ ಹಡಗು ಮಂಗಳೂರಿನ ಹಳೆ ಬಂದರಿನಿಂದ ಜಲ್ಲಿ ಕಲ್ಲು, ಸಿಮೆಂಟ್, ಮರಳು, ಕಬ್ಬಿಣ ಮತ್ತಿತರ ಮನೆ ನಿರ್ಮಾಣದ ಸಾಮಗ್ರಿಗಳನ್ನು ಹೊತ್ತುಕೊಂಡು ಹೊರಟಿತ್ತು. ಮಾ.13ರಂದು ಹಡಗು ಲಕ್ಷದ್ವೀಪ ತಲುಪಿದ್ದು, ಅಲ್ಲಿನ ಆಂದ್ರೋತ್ ದ್ವೀಪದಲ್ಲಿ ಅರ್ಧದಷ್ಟು ಸಾಮಗ್ರಿ ಖಾಲಿ ಮಾಡಿ ಬಳಿಕ ಅಗತಿ ದ್ವೀಪತ್ತ ಹೊರಟಿತ್ತು. ರಾತ್ರಿ ವೇಳೆ ಸಂಚಾರದ ಬಳಿಕ ಮರುದಿನ ಬೆಳಗ್ಗಿನ ಹೊತ್ತಿಗೆ ಹಡಗಿನ ಎಂಜಿನ್ನಲ್ಲಿ ತಾಂತ್ರಿಕ ತೊಂದರೆ ಎದುರಾಗಿತ್ತು. ಕ್ಯಾಪ್ಟನ್ ಹಾಗೂ ಸಿಬಂದಿ ದುರಸ್ತಿಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಮಧ್ಯೆ ಜೋರಾದ ಗಾಳಿಗೆ ಸಿಲುಕಿ ಹಡಗು ನಿಯಂತ್ರಣ ಕಳಕೊಂಡು ನೀರು ಒಳನುಗ್ಗಲು ಆರಂಭಿಸಿತ್ತು.



ಹಡಗು ಅಪಾಯಕ್ಕೀಡಾಗಿ ಮುಳುಗಲು ಆರಂಭಿಸಿದಾಗ, ಅದರಲ್ಲಿ ಸಣ್ಣ ಬೋಟು ಪಾತಿಯನ್ನು ಬಳಸಿಕೊಂಡು ಹಡಗಿನಲ್ಲಿದ್ದ ಎಂಟು ಮಂದಿ ಸಿಬಂದಿ ಪ್ರಾಣ ರಕ್ಷಣೆಗಾಗಿ ಸಮುದ್ರಕ್ಕೆ ಹಾರಿದ್ದರು. ಇದೇ ವೇಳೆ, ಮಂಗಳೂರು ಕೋಸ್ಟ್ ಗಾರ್ಡ್ ಗೆ ಮಾಹಿತಿ ನೀಡಲಾಗಿತ್ತು. ಕೋಸ್ಟ್ ಗಾರ್ಡ್ ಕಡೆಯಿಂದ ಲಕ್ಷದ್ವೀಪಕ್ಕೆ ಮಾಹಿತಿ ನೀಡಿ, ಮಾರ್ಚ್ 15ರಿಂದ ಎರಡು ದಿನಗಳ ಕಾಲ ಹುಡುಕಾಟ ನಡೆಸಿದರೂ ಹಡಗು ಸಿಬಂದಿಯ ಮಾಹಿತಿ ಸಿಕ್ಕಿರಲಿಲ್ಲ. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿ ನಾಗಲಿಂಗಂ, ನಲ್ಲಮುತ್ತು ಗೋಪಾಲ್, ಮಣಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್, ಕುಪ್ಪುರಾಮನ್ ಮತ್ತು ಮುರುಗನ್ ಸೇರಿದಂತೆ ಎಂಟು ಮಂದಿ ಇದ್ದರು.
ಮಾರ್ಚ್ 18ರಂದು ಲಕ್ಷದ್ವೀಪದ ಕಲ್ಪೇನಿ ದ್ವೀಪದ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರ ಮಧ್ಯೆ ಎಂಟು ಮಂದಿ ಮೀನುಗಾರರು ತೇಲುತ್ತಿದ್ದು ರಕ್ಷಣೆಗಾಗಿ ಕೈಬೀಸುತ್ತಿರುವುದು ಕಂಡುಬಂದಿತ್ತು. ಮೀನುಗಾರರು ಬಳಿಕ ಅವರನ್ನು ರಕ್ಷಿಸಿ ಕಲ್ಪೇನಿ ದ್ವೀಪಕ್ಕೆ ಕರೆದೊಯ್ದು ಉಪಚರಿಸಿದ್ದರು. ಮಂಗಳೂರು ಕೋಸ್ಟ್ ಗಾರ್ಡ್ ಮಾಹಿತಿ ಪಡೆದು ಸ್ಪೀಡ್ ಬೋಟ್ ಮೂಲಕ ಎಂಟು ಮಂದಿ ಹಡಗು ಸಿಬಂದಿಯನ್ನು ಕೊಚ್ಚಿ ದ್ವೀಪಕ್ಕೆ ಕರೆದೊಯ್ದಿದ್ದಾರೆ. ಹಡಗಿನ ಮಾಲೀಕರು ಕೊಚ್ಚಿನ್ ತೆರಳಿದ್ದು, ಸಿಬಂದಿಯನ್ನು ಕರೆತರಲಿದ್ದಾರೆ ಎಂದು ಮಂಗಳೂರು ಹಳೆಬಂದರು ಸಂಘದ ಕಾರ್ಯದರ್ಶಿ ಅಬ್ದುಲ್ ಲತೀಫ್ ತಿಳಿಸಿದ್ದಾರೆ.
Boat carrying items to lakshadweep from Mangalore capsized. Three days 8 fishermen were without food and water. Finally cost gaurd have arrived for their help and rescued them.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm