ಬ್ರೇಕಿಂಗ್ ನ್ಯೂಸ್
23-03-24 10:21 am Mangaluru Correspondent ಕರಾವಳಿ
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ವಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ.
ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಸಾವನ್ನಪ್ಪಿರುವ ಯುವಕ. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಲಿತಾ ಸುಂದರ್ ಅವರು ಬಿಜೆಪಿಯ ಹಿರಿಯ ನಾಯಕಿಯಾಗಿದ್ದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಆಶೀರ್ವಾದ್ ಕಾಂಪ್ಲೆಕ್ಸ್ ಹೆಸರಿನ ಬೃಹತ್ ವಾಣಿಜ್ಯ ಕಟ್ಟಡ ಮತ್ತು ಹೊಟೇಲ್ ಹೊಂದಿದ್ದಾರೆ. ಲಲಿತಾ ಅವರ ಏಕೈಕ ಮಗ ಸಂತೋಷ್ ಯಾನೆ ಸಂತು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದ. ಶಮಿತ್ ಮದುವೆ ಮಾಡಲು ವಧುವಿನ ಅನ್ವೇಷಣೆಯನ್ನೂ ಪೋಷಕರು ನಡೆಸುತ್ತಿದ್ದರು.
ಲಲಿತಾ ಸುಂದರ್ ಅವರು ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ನ ಕೊರಗಜ್ಜ ಸೇವಾ ಸಮಿತಿಯ ಗೌರವಾಧ್ಯಕ್ಷೆ ಆಗಿದ್ದು ಕುಟುಂಬವು ಕಳೆದ ಎರಡು ವರುಷದ ಹಿಂದೆ ಕೊರಗಜ್ಜನಿಗೆ ಬೆಳ್ಳಿಯ ಮುಟ್ಟಾಲೆ, ದಂಟೆಯನ್ನ ಹರಕೆ ರೂಪದಲ್ಲಿ ಸಮರ್ಪಿಸಿತ್ತು. ಶಮಿತ್ ಅವರ ಅಕಾಲಿಕ ಅಗಲಿಕೆಗೆ ಬಿಜೆಪಿ ಜಿಲ್ಲಾ ಮತ್ತು ಮಂಗಳೂರು ಮಂಡಲದ ನಾಯಕರು ಶೋಕ ವ್ಯಕ್ತ ಪಡಿಸಿದ್ದಾರೆ. ಮೃತ ಶಮಿತ್ ತಾಯಿ, ಸಹೋದರಿ, ಅಜ್ಜಿಯನ್ನು ಅಗಲಿದ್ದಾರೆ.
Mangalore car accident in Nanthoor, a 29-year-old youth from Thokottu was killed. The deceased has been identified as Sameeth Shetty, the grandson of BJP leader Lalitha Sunder.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm