ಬ್ರೇಕಿಂಗ್ ನ್ಯೂಸ್
23-03-24 10:21 am Mangaluru Correspondent ಕರಾವಳಿ
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪ್ಪಚ್ವಿಯಾದ ಘಟನೆ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದ್ದು ಭೀಕರ ರಸ್ತೆ ಅಪಘಾತಕ್ಕೆ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ.
ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಸಾವನ್ನಪ್ಪಿರುವ ಯುವಕ. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.






ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಲಿತಾ ಸುಂದರ್ ಅವರು ಬಿಜೆಪಿಯ ಹಿರಿಯ ನಾಯಕಿಯಾಗಿದ್ದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಆಶೀರ್ವಾದ್ ಕಾಂಪ್ಲೆಕ್ಸ್ ಹೆಸರಿನ ಬೃಹತ್ ವಾಣಿಜ್ಯ ಕಟ್ಟಡ ಮತ್ತು ಹೊಟೇಲ್ ಹೊಂದಿದ್ದಾರೆ. ಲಲಿತಾ ಅವರ ಏಕೈಕ ಮಗ ಸಂತೋಷ್ ಯಾನೆ ಸಂತು ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದ. ಶಮಿತ್ ಮದುವೆ ಮಾಡಲು ವಧುವಿನ ಅನ್ವೇಷಣೆಯನ್ನೂ ಪೋಷಕರು ನಡೆಸುತ್ತಿದ್ದರು.
ಲಲಿತಾ ಸುಂದರ್ ಅವರು ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ನ ಕೊರಗಜ್ಜ ಸೇವಾ ಸಮಿತಿಯ ಗೌರವಾಧ್ಯಕ್ಷೆ ಆಗಿದ್ದು ಕುಟುಂಬವು ಕಳೆದ ಎರಡು ವರುಷದ ಹಿಂದೆ ಕೊರಗಜ್ಜನಿಗೆ ಬೆಳ್ಳಿಯ ಮುಟ್ಟಾಲೆ, ದಂಟೆಯನ್ನ ಹರಕೆ ರೂಪದಲ್ಲಿ ಸಮರ್ಪಿಸಿತ್ತು. ಶಮಿತ್ ಅವರ ಅಕಾಲಿಕ ಅಗಲಿಕೆಗೆ ಬಿಜೆಪಿ ಜಿಲ್ಲಾ ಮತ್ತು ಮಂಗಳೂರು ಮಂಡಲದ ನಾಯಕರು ಶೋಕ ವ್ಯಕ್ತ ಪಡಿಸಿದ್ದಾರೆ. ಮೃತ ಶಮಿತ್ ತಾಯಿ, ಸಹೋದರಿ, ಅಜ್ಜಿಯನ್ನು ಅಗಲಿದ್ದಾರೆ.
Mangalore car accident in Nanthoor, a 29-year-old youth from Thokottu was killed. The deceased has been identified as Sameeth Shetty, the grandson of BJP leader Lalitha Sunder.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm