ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm