ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm