ಬ್ರೇಕಿಂಗ್ ನ್ಯೂಸ್
25-03-24 07:39 pm Mangaluru Correspondent ಕರಾವಳಿ
ಮಂಗಳೂರು, ಮಾ.25: ಇಡೀ ದೇಶಕ್ಕೆ ಇರುವ ದೊಡ್ಡ ಗ್ಯಾರಂಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಎಲ್ಲಾ ಗ್ಯಾರಂಟಿಗಳಿಗೂ ಗ್ಯಾರಂಟಿ ಪ್ರಧಾನಿ ಮೋದಿ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಮಂದಿ ಕಾಂಗ್ರೆಸಿಗೆ ಗ್ಯಾರಂಟಿ ಯೋಜನೆ ಇದೆ, ನಿಮ್ಮದೇನು ಸ್ಟ್ರಾಟಜಿ ಇದೆಯೆಂಬ ಪ್ರಶ್ನೆಗೆ, ನರೇಂದ್ರ ಮೋದಿಯವರ ಸಾಧನೆಗಳು,10 ವರ್ಷದಲ್ಲಿ ದೇಶದಲ್ಲಿ ಅವರು ಮಾಡಿರುವ ಕೆಲಸ. ಮುಂದಿನ 25 ವರ್ಷಗಳ ಕಾಲ ವಿಕಸಿತ ಭಾರತದ ಕಲ್ಪನೆ, ಎಲ್ಲರೂ ಒಟ್ಟಾಗಿ ಒಂದಾಗಿ ಸೇರಿಕೊಂಡು ದೇಶದ ಅಭಿವೃದ್ಧಿ ಮಾಡಬೇಕು ಎಂಬ ಪರಿಕಲ್ಪನೆ. ಭಾರತ ದೇಶವನ್ನು ನಂಬರ್ ಒನ್ ಮಾಡಬೇಕು ಅನ್ನೋದೇ ನಮ್ಮ ಗ್ಯಾರೆಂಟಿ ಎಂದು ಹೇಳಿದರು.


ಕಾಂಗ್ರೆಸ್ ನ ಗ್ಯಾರೆಂಟಿ ಯಾವ ರೀತಿ ಆಗುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಯಾವುದೇ ಶಿಲಾನ್ಯಾಸ ಮಾಡದ ಮುಖ್ಯಮಂತ್ರಿ ಅಂದ್ರೆ ಅದು ಸಿದ್ದರಾಮಯ್ಯ. ಯಾವುದೇ ಹೊಸ ಯೋಜನೆಗೆ ಶಿಲಾನ್ಯಾಸ ಮಾಡದ ಜಿಲ್ಲಾ ಉಸ್ತುವಾರಿ ಸಚಿವ ಅಂದ್ರೆ ಅದು ದಿನೇಶ್ ಗುಂಡೂರಾವ್. ಗ್ಯಾರಂಟಿಗೆ ದುಡ್ಡು ಕೊಟ್ಟು ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲದ ಸ್ಥಿತಿಯಾಗಿದೆ ಎಂದು ಟಾಂಗ್ ಇಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನ ಕೊಟ್ಟಿದೆ. 5 ರಾಷ್ಟ್ರೀಕೃತ ಬ್ಯಾಂಕ್ ಗಳನ್ನ ದೇಶಕ್ಕೆ ಕೊಟ್ಟಿದೆ. ಇಂತಹ ಪ್ರಗತಿಶೀಲ ಜಿಲ್ಲೆಯನ್ನ ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯಡಿಯಲ್ಲಿ ದೇಶದ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇನೆ ಎಂದು ಚೌಟ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರಿಡುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ನಾವು ತುಳುನಾಡಿನ ದೈವ ದೇವರನ್ನ ನಂಬುವಂತಹ ಪಾರ್ಟಿ. ಕೋಟಿ ಚೆನ್ನಯ್ಯರು ನಮ್ಮೆಲ್ಲರಿಗೂ ಪ್ರೇರಣಾ ಶಕ್ತಿ. ನಮ್ಮೆಲ್ಲರಿಗೂ ದೈವೀ ಸ್ವರೂಪವಾದ ಶಕ್ತಿ. ಕೋಟಿ ಚೆನ್ನಯ್ಯರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಇಡೀ ರಾಜ್ಯದ ಜನರಿಗೆ ಪ್ರೇರಣಾದಾಯಿ ಹೆಸರಾಗಬೇಕು. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನ ಮಾಡುತ್ತೇವೆ.
ರಾಜ್ಯ ಸರಕಾರದಿಂದ ಈ ಪ್ರಸ್ತಾವನೆಯನ್ನ ಈಗಾಗಲೇ ಕೇಂದ್ರಕ್ಕೆ ಕಳುಹಿಸಲಾಗಿದೆ. ಅದನ್ನ ಬೆನ್ನು ಹಿಡಿದು ಕೆಲಸ ಆಗುವಂತೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.
Making India no 1 is our guarantee says BJP Candidate Brijesh Chowta in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am