ಬ್ರೇಕಿಂಗ್ ನ್ಯೂಸ್
25-03-24 07:39 pm Mangaluru Correspondent ಕರಾವಳಿ
ಮಂಗಳೂರು, ಮಾ.25: ಇಡೀ ದೇಶಕ್ಕೆ ಇರುವ ದೊಡ್ಡ ಗ್ಯಾರಂಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಎಲ್ಲಾ ಗ್ಯಾರಂಟಿಗಳಿಗೂ ಗ್ಯಾರಂಟಿ ಪ್ರಧಾನಿ ಮೋದಿ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಮಂದಿ ಕಾಂಗ್ರೆಸಿಗೆ ಗ್ಯಾರಂಟಿ ಯೋಜನೆ ಇದೆ, ನಿಮ್ಮದೇನು ಸ್ಟ್ರಾಟಜಿ ಇದೆಯೆಂಬ ಪ್ರಶ್ನೆಗೆ, ನರೇಂದ್ರ ಮೋದಿಯವರ ಸಾಧನೆಗಳು,10 ವರ್ಷದಲ್ಲಿ ದೇಶದಲ್ಲಿ ಅವರು ಮಾಡಿರುವ ಕೆಲಸ. ಮುಂದಿನ 25 ವರ್ಷಗಳ ಕಾಲ ವಿಕಸಿತ ಭಾರತದ ಕಲ್ಪನೆ, ಎಲ್ಲರೂ ಒಟ್ಟಾಗಿ ಒಂದಾಗಿ ಸೇರಿಕೊಂಡು ದೇಶದ ಅಭಿವೃದ್ಧಿ ಮಾಡಬೇಕು ಎಂಬ ಪರಿಕಲ್ಪನೆ. ಭಾರತ ದೇಶವನ್ನು ನಂಬರ್ ಒನ್ ಮಾಡಬೇಕು ಅನ್ನೋದೇ ನಮ್ಮ ಗ್ಯಾರೆಂಟಿ ಎಂದು ಹೇಳಿದರು.


ಕಾಂಗ್ರೆಸ್ ನ ಗ್ಯಾರೆಂಟಿ ಯಾವ ರೀತಿ ಆಗುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಯಾವುದೇ ಶಿಲಾನ್ಯಾಸ ಮಾಡದ ಮುಖ್ಯಮಂತ್ರಿ ಅಂದ್ರೆ ಅದು ಸಿದ್ದರಾಮಯ್ಯ. ಯಾವುದೇ ಹೊಸ ಯೋಜನೆಗೆ ಶಿಲಾನ್ಯಾಸ ಮಾಡದ ಜಿಲ್ಲಾ ಉಸ್ತುವಾರಿ ಸಚಿವ ಅಂದ್ರೆ ಅದು ದಿನೇಶ್ ಗುಂಡೂರಾವ್. ಗ್ಯಾರಂಟಿಗೆ ದುಡ್ಡು ಕೊಟ್ಟು ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲದ ಸ್ಥಿತಿಯಾಗಿದೆ ಎಂದು ಟಾಂಗ್ ಇಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನ ಕೊಟ್ಟಿದೆ. 5 ರಾಷ್ಟ್ರೀಕೃತ ಬ್ಯಾಂಕ್ ಗಳನ್ನ ದೇಶಕ್ಕೆ ಕೊಟ್ಟಿದೆ. ಇಂತಹ ಪ್ರಗತಿಶೀಲ ಜಿಲ್ಲೆಯನ್ನ ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯಡಿಯಲ್ಲಿ ದೇಶದ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇನೆ ಎಂದು ಚೌಟ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರಿಡುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ನಾವು ತುಳುನಾಡಿನ ದೈವ ದೇವರನ್ನ ನಂಬುವಂತಹ ಪಾರ್ಟಿ. ಕೋಟಿ ಚೆನ್ನಯ್ಯರು ನಮ್ಮೆಲ್ಲರಿಗೂ ಪ್ರೇರಣಾ ಶಕ್ತಿ. ನಮ್ಮೆಲ್ಲರಿಗೂ ದೈವೀ ಸ್ವರೂಪವಾದ ಶಕ್ತಿ. ಕೋಟಿ ಚೆನ್ನಯ್ಯರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಇಡೀ ರಾಜ್ಯದ ಜನರಿಗೆ ಪ್ರೇರಣಾದಾಯಿ ಹೆಸರಾಗಬೇಕು. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನ ಮಾಡುತ್ತೇವೆ.
ರಾಜ್ಯ ಸರಕಾರದಿಂದ ಈ ಪ್ರಸ್ತಾವನೆಯನ್ನ ಈಗಾಗಲೇ ಕೇಂದ್ರಕ್ಕೆ ಕಳುಹಿಸಲಾಗಿದೆ. ಅದನ್ನ ಬೆನ್ನು ಹಿಡಿದು ಕೆಲಸ ಆಗುವಂತೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.
Making India no 1 is our guarantee says BJP Candidate Brijesh Chowta in Mangalore
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm