ಬ್ರೇಕಿಂಗ್ ನ್ಯೂಸ್
26-03-24 12:06 pm Mangalore Correspondent ಕರಾವಳಿ
ಪುತ್ತೂರು, ಮಾ.26: ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಗ್ರಾಮದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದ ಅನುಮಾನದಲ್ಲಿ ಸುಬ್ರಹ್ಮಣ್ಯ ಠಾಣೆ ಪೊಲೀಸರು ನಾಲ್ವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ.
ಈ ಬಗ್ಗೆ ನಕ್ಸಲ್ ನಿಗ್ರಹ ದಳ, ಕಾರ್ಕಳ ವಿಭಾಗೀಯ ಎಸ್ ಪಿ ಜಿತೇಂದ್ರ ಮಾಹಿತಿ ನೀಡಿದ್ದಾರೆ, ರೈತ ಅಶೋಕ್ ಎಂಬವರ ಮನೆಗೆ ಬಂದಿದ್ದ ಶಂಕಿತ ನಕ್ಸಲರು ಅವರ ಮನೆಯಿಂದ ಅಕ್ಕಿ, ಮೆಣಸಿನಕಾಯಿ ಹಾಗೂ ಇನ್ನಿತರ ದಿನಸಿ ಪದಾರ್ಥಗಳನ್ನು ಕೊಂಡೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಸಂಜೆ 6.30 ಕ್ಕೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ನಮ್ಮ ಮನೆಗೆ ಬಂದಿದ್ದರು. ಓರ್ವ ಮಹಿಳೆ 30-35 ವರ್ಷದ ವಯಸ್ಸಿನವರಾಗಿದ್ದು, ಮತ್ತೋರ್ವ ಮಹಿಳೆಗೆ 40-45 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಬಳಿ ಬಂದೂಕು ಹೊಂದಿದ್ದರು. ಕನ್ನಡ, ತುಳು ಭಾಷೆಗಳಲ್ಲಿ ಮಾತನಾಡುತ್ತಿದ್ದರು. ಅವರು ತಮ್ಮನ್ನು ನಕ್ಸಲರೆಂದು ಪರಿಚಯಿಸಿಕೊಂಡು, ಬಡವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲದೇ ಆಹಾರ ಕೇಳಿಕೊಂಡ ಅವರು ಕೆಲವು ದಿನಸಿ ಪದಾರ್ಥಗಳನ್ನು ಕೇಳಿ ಪಡೆದಿದ್ದಾರೆ. ಭಯದಿಂದ ನಾವು ಅವರು ಕೇಳಿದ್ದನ್ನು ಕೊಟ್ಟೆವು. ತಮ್ಮನ್ನು ಬೆಂಬಲಿಸುವಂತೆ ಕೇಳಿದ ಅವರು ಈ ಮಾಹಿತಿಯನ್ನು ಯಾರಿಗಾದರೂ ನೀಡಿದರೆ ಕೊಲ್ಲುವುದಾಗಿ ಬಂದೂಕು ತೋರಿಸಿ ಬೆದರಿಕೆ ಹಾಕಿ ಸಂಜೆ 7:30 ವೇಳೆಗೆ ಹೊರಟುಹೋದರು ಎಂದು ಅಶೋಕ್ ಹೇಳಿದ್ದಾರೆ.
ಶಂಕಿತ ನಕ್ಸಲರ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಮತ್ತು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Mangalore Naxals movement at Inakidu village in kukke subramanya, FIR lodged on four. Three unidentified persons, suspected to be cadres of the Communist Party of India-Maoist (CPI-Maoist), reportedly visited a house near Kukke Subrahmanya in Kadaba taluk (revenue unit) in Dakshina Kannada District of Karnataka on March 23.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am