ಬ್ರೇಕಿಂಗ್ ನ್ಯೂಸ್
26-03-24 08:45 pm Mangalore Correspondent ಕರಾವಳಿ
ಮಂಗಳೂರು, ಮಾ.26: 2014ರ ನಂತರ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾವರಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ ಸಾಧ್ಯ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಬಂಟ್ವಾಳ ತಾಲೂಕಿನಲ್ಲಿ ಮತ ಯಾಚನೆಗೆ ಪ್ರವಾಸ ಕೈಗೊಂಡ ಸಂದರ್ಭ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುವ ಮೊದಲು ದೇಶದ್ರೋಹಿಗಳ ಅಟ್ಟಹಾಸ ಎಲ್ಲೆ ಮೀರಿತ್ತು. ದೇಶದಲ್ಲಿ ಭಯದ ವಾತಾವರಣ ನೆಲೆಸಿತ್ತು. 2014ರ ನಂತರ ಮೊದಲ ಬಾರಿಗೆ ಬದಲಾವಣೆಯ ಅಲೆ ಸೈನ್ಯ ವ್ಯವಸ್ಥೆಯಲ್ಲಿ ಕಾಣಿಸಿಕೊಂಡಿತ್ತು. ಆಧುನಿಕ ಆಯುಧಗಳು, ಸೈನಿಕರಿಗೆ ದೊರೆತ ಸುರಕ್ಷಾ ಸಾಮಗ್ರಿಗಳು, ಉನ್ನತ ಗುಣಮಟ್ಟದ ಯುದ್ಧ ಸಾಮಗ್ರಿಗಳಿಂದ ನಮ್ಮ ದೇಶದ ಸೈನ್ಯ ವ್ಯವಸ್ಥೆಯು ಈಗ ಅತ್ಯಂತ ಸುರಕ್ಷಿತ ಹಾಗೂ ಸಮರ್ಥವಾಗಿದೆ ಎಂದರು.








ಉಗ್ರರ ದಾಳಿ, ಬಾಂಬ್ ಬ್ಲಾಸ್ಟ್ ನಂತಹ ದೇಶ ವಿರೋಧಿ ಕೃತ್ಯಗಳು ದೇಶದಲ್ಲಿ ಸಂಪೂರ್ಣವಾಗಿ ನಿಂತಿವೆ. ಇದಕ್ಕೆಲ್ಲ ಕಾರಣ, ಗಟ್ಟಿಯಾದ ಆಡಳಿತ, ಸುಭದ್ರ ಸರ್ಕಾರವಾಗಿದೆ. ನಮ್ಮ ದೇಶಕ್ಕೆ ಶತ್ರುಗಳಿಲ್ಲ ಅಂತ ಅಲ್ಲ. ದೇಶದ ಹೊರಗೂ, ಒಳಗೂ ಶತ್ರುಗಳಿದ್ದಾರೆ. ಅಂಥವರನ್ನು ಹದ್ದುಬಸ್ತಿನಲ್ಲಿಡಲು ಮೋದಿಯಂತಹ ಸಮರ್ಥ ನಾಯಕತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ ಎಂದರು.
ಪ್ರಸ್ತುತ 2024ರ ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸುವ ಮೂಲಕ, ಸಮರ್ಥ ನಾಯಕತ್ವದ ಮೋದಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ. ನಮ್ಮ ದೇಶವನ್ನು ಮತ್ತಷ್ಟು ಸಮೃದ್ಧಗೊಳಿಸೋಣ ಎಂದು ಎಲ್ಲರ ಸಹಕಾರವನ್ನು ಕೋರಿದರು.
ನಾನು ಸೈನ್ಯದಲ್ಲಿ ಕೆಲಸ ಮಾಡಿದವನು. ಅಲ್ಲಿನ ಕಠಿಣ ಪರಿಸ್ಥಿತಿಗಳು ನನಗೆ ಗೊತ್ತು. ಒಂದು ಬಾಂಬ್ ಬ್ಲಾಸ್ಟ್ ಆದ ನಂತರದ ಪರಿಸ್ಥಿತಿಗಳು ನಮಗೆಲ್ಲ ತಿಳಿದಿರುತ್ತವೆ. ಆದರೆ, ಬ್ಲಾಸ್ಟ್ ಆಗದೇ ಇರುವಂತೆ ನೋಡಿಕೊಳ್ಳುವುದಕ್ಕೆ ಬೇಕಾದ ಆಡಳಿತ ವ್ಯವಸ್ಥೆ, ಸುರಕ್ಷಾ ವ್ಯವಸ್ಥೆ ಹಾಗೂ ಇಂಟಲಿಜೆನ್ಸ್ ವ್ಯವಸ್ಥೆಗಳನ್ನು ಸಮರ್ಥವಾಗಿಟ್ಟು ದೇಶ ಮುನ್ನಡೆಸುವುದು ಸಮರ್ಥ ಆಡಳಿತ ನಡೆಸುವವರಿಗೆ ಮಾತ್ರ ಗೊತ್ತು ಎಂದರು.
ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಬಂಟ್ವಾಳ ಮಂಡಲದ ಪ್ರವಾಸವನ್ನು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವರ ದರ್ಶನ ಪಡೆದು ಪ್ರಾರಂಭಿಸಿದರು. ಬಳಿಕ ಕಾವಳಪಡ್ನೂರು ಮಹಾಶಕ್ತಿಕೇಂದ್ರ, ನಾವೂರು ಮಹಾ ಶಕ್ತಿಕೇಂದ್ರ, ನರಿಕೊಂಬು ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
After 2014, the Modi government has created a peace, order and fear-free atmosphere in the country. Such governance is possible only through them," said Bjp's Dakshina Kannada Lok Sabha candidate K Sudhakaran Brijesh Chowta said.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm