ಬ್ರೇಕಿಂಗ್ ನ್ಯೂಸ್
26-03-24 09:57 pm Mangalore Correspondent ಕರಾವಳಿ
ಮಂಗಳೂರು, ಮಾ.26: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಸುಟ್ಟು ಕೊಂದ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
“ದುಷ್ಕರ್ಮಿಗಳ ತಂಡವೊಂದು ಮೋಸದಿಂದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಯುವಕರನ್ನು ತುಮಕೂರಿಗೆ ಕರೆಸಿ ಹಣ ದೋಚಿ ಹತ್ಯೆ ಮಾಡಿದೆ. ಪತ್ರಿಕೆ ವರದಿಗಳ ಮೂಲಕ ಹತ್ಯೆಗೀಡಾದವರು 6 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಕೊಲೆಗಡುಕರು 60 ಲಕ್ಷದಿಂದ 1 ಕೋಟಿ ರೂ. ವರೆಗೆ ದೋಚಿದ್ದಾರೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು. ಮೋಸದ ಜಾಲದ ಹಿಂದಿರುವ ನೈಜ್ಯ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಈ ಮೂರು ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.
![]()
ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮ.ನ.ಪಾ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಶುಭಾಷ್ಚಂದ್ರ ಶೆಟ್ಟಿ ಇದ್ದರು.
ಇದಕ್ಕೂ ಮುನ್ನ ಕೊಲೆಯಾದ ಬೆಳ್ತಂಗಡಿಯ ಮೂವರು ಯುವಕರ ಮನೆಗೆ ಭೇಟಿ ನೀಡಿದ ನಿಯೋಗ, ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.
Tumkuru three from Belthangady killed in car burnt case, Congress leaders visit sp demand for strict action.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am