ಬ್ರೇಕಿಂಗ್ ನ್ಯೂಸ್
27-03-24 09:11 pm Mangaluru Correspondent ಕರಾವಳಿ
ಮಂಗಳೂರು, ಮಾ.27: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದ್ದಾರೆ.
ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರಕಾರವನ್ನು ಸರಿದಾರಿಗೆ ತರಲಿ. ಸ್ವತಃ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದೂ ದಲಿತ, ಹಿಂದುಳಿದ ವರ್ಗದವರ ಕುರಿತ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ಧೋರಣೆಯನ್ನು ಸರಿಪಡಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಭಾಗ್ಯಗಳಿಗೆ ಹಣ ಹೊಂದಿಸಲು ದಲಿತ, ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಕಳೆದ ವರ್ಷ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೊಟಿ ರೂ. ಹಾಗೂ ಈ ವರ್ಷ 14 ಸಾವಿರ ಕೋಟಿ ರೂ.ಗಳನ್ನು ಬಿಟ್ಟಿ ಭಾಗ್ಯಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಆಮೂಲಕ ಹಿಂದುಳಿದ ವರ್ಗಗಳ ಬಗ್ಗೆ ತನಗೆಷ್ಟು ಕಾಳಜಿ ಇದೆ ಎಂಬುದನ್ನು ತಾನೇ ಬಹಿರಂಗಪಡಿಸಿದೆ ಎಂದು ಶಾಸಕ ಹರೀಶ್ ಪೂಂಜ ಟೀಕಿಸಿದರು.
ನಗರದ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತಾಗಿದೆ ಕಾಂಗ್ರೆಸ್ ಪರಿಸ್ಥಿತಿ. ಅಂದು ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಎಂದಿದ್ದರು. ಬಳಿಕ ಮಲ್ಲಿಕಾರ್ಜುನ ಖರ್ಗೆ ಮೋದಿಯವರನ್ನು ವಿಷ ಸರ್ಪ ಎಂದಿದ್ದರು. ಸಿದ್ದರಾಮಯ್ಯ ಅವರಂತೂ ಏಕವಚನದಲ್ಲಿ ಮಾತನಾಡುತ್ತಾರೆ. ಅದರ ಮುಂದುವರೆದ ಭಾಗವಾಗಿ ಈಗ ಸಚಿವ ಶಿವರಾಜ್ ತಂಗಡಗಿ ಮೋದಿಯವರಿಗೆ ಬೆಂಬಲಿಸುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದಾರೆ. ಚುನಾವಣಾ ಸೋಲಿನ ವಾಸನೆ ಬರುತ್ತಿದ್ದಂತೆ ಕಾಂಗ್ರೆಸ್ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತದೆ, ದೇಶದಲ್ಲಿ ಪಾತಾಳಕ್ಕೆ ತಲುಪಿರುವ ಕಾಂಗ್ರೆಸ್, ರಾಜ್ಯದಲ್ಲೂ ಪಾತಾಳಕ್ಕೆ ಕುಸಿಯುವ ಭಯದಿಂದ ಈ ರೀತಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹರೀಶ ಪೂಂಜ ಹೇಳಿದರು.
ಸುಮಾರು 1.84 ಕೋಟಿ ಮೊದಲ ಬಾರಿಗೆ ಮತ ಚಲಾಯಿಸುವವರು ಮೋದಿಯವರ ಜೊತೆಗಿದ್ದಾರೆ. 20- 29 ವರ್ಷ ವಯಸ್ಸಿನ ಯುವಕರು 19.74 ಕೋಟಿ ಮತದಾರರು ಮೋದಿಯವರ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ, ಅದಕ್ಕಾಗಿಯೇ ಕಾಂಗ್ರೆಸ್ ಹೆದರುತ್ತಿದೆ. ಮೋದಿಯವರ ಪರ ಘೋಷಣೆ ಕೂಗಿದವರಿಗೆ ಕಪಾಳಮೋಕ್ಷ ಮಾಡುವ ಸಚಿವರ ಕರೆ ಗಾಂಧಿಯವರ ಅಹಿಂಸಾತ್ಮಕ ಆದರ್ಶಗಳಿಗೆ ವಿರುದ್ಧವಾಗಿದೆ. ಇದು ಕಾಂಗ್ರೆಸ್ ಪಕ್ಷದ ನೀತಿಯಲ್ಲಿ ಆತಂಕಕಾರಿ ಬದಲಾವಣೆಯನ್ನು ಸೂಚಿಸುತ್ತದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಇಂತಹ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸವಾಲೆಸೆಯುವಂತಿದೆ ಎಂದು ಪೂಂಜ ನುಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೊಟ್ಯಾಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಯುವಮೋರ್ಚಾ ಉಪಾಧ್ಯಕ್ಷ ಅಶ್ರಿತ್ ನೋಂಡ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ, ಮಾಧ್ಯಮ ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ ಉಪಸ್ಥಿತರಿದ್ದರು.
Bjp MLA Harish poonja slams remarks made by Shivaraj Tangadagi. BJP condemns statement made by Shivaraj Tangadagi. Tangadagi on Monday stoked a major controversy by saying that youths and students chanting ‘Modi, Modi’ slogans should be slapped. The statement garnered sharp reactions from the opposition party, to which the former CM said, “Wait for some time, people will slap the Congress party through voting.”
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 03:08 pm
HK News Desk
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
13-06-25 03:46 pm
Mangalore Correspondent
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm