ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm