ಬ್ರೇಕಿಂಗ್ ನ್ಯೂಸ್
30-03-24 10:35 pm Mangalore Correspondent ಕರಾವಳಿ
ಪುತ್ತೂರು, ಮಾ.30: ಕಡಬದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ ಮುಖಂಡರು ತಮ್ಮನ್ನು ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ನಾಯಕರ ಜೊತೆಗೆ ವಾಗ್ವಾದ ನಡೆಸಿದ ಪ್ರಸಂಗ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಏರು ಧ್ವನಿಯಲ್ಲಿ ರಾಜ್ಯ ಮಟ್ಟದ ನಾಯಕರು ಸ್ಥಳೀಯ ನಾಯಕರು ಪ್ರಶ್ನೆ ಮಾಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಡಬ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಕೃಷ್ಣಪ್ಪ ಅವರನ್ನು ರಾಜ್ಯ ಘಟಕ ಅಭ್ಯರ್ಥಿ ಮಾಡಿದ್ದಕ್ಕೆ ಸ್ಥಳೀಯ ನಾಯಕರು ವಿರೋಧಿಸಿದ್ದರು. ತಮ್ಮ ಅಭ್ಯರ್ಥಿ ನಂದ ಕುಮಾರ್ ಎಂದು ಪ್ರತ್ಯೇಕವಾಗಿ ಸಭೆಯನ್ನೂ ನಡೆಸಿದ್ದರು. ಬಂಡಾಯ ಸ್ಪರ್ಧಿಸುವ ಬಗ್ಗೆಯೂ ಮಾತನಾಡಿದ್ದರು. ಬಳಿಕ ಆ ವಿಚಾರವನ್ನು ಅಲ್ಲಿಂದಲ್ಲಿಗೆ ಕೊನೆಗೊಳಿಸಲಾಗಿತ್ತು. ನಂದಕುಮಾರ್ ಬಣವೂ ತಣ್ಣಗಾಗಿತ್ತು.
ಆದರೆ ಇದೀಗ ಲೋಕಸಭೆ ಚುನಾವಣೆಯ ಪ್ರಚಾರ ಶುರುವಾಗುತ್ತಿದ್ದಂತೆ ಕಡಬ ಬ್ಲಾಕ್ ಕಾಂಗ್ರೆಸಿನ ಮುಸ್ಲಿಂ ಮುಖಂಡರು ಜಿಲ್ಲಾ ನಾಯಕರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಸಭೆ ಶುರುವಾಗೋದಕ್ಕೂ ಮುನ್ನ ಕೆಲವು ಸ್ಥಳೀಯ ಪುಢಾರಿಗಳು ತಮಗೇನೂ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಪ್ರಶ್ನೆ ಎತ್ತಿದ್ದಾರೆ. ಸಮಾಧಾನಿಸಲು ಬಂದು ವಿನಯ ಕುಮಾರ್ ಸೊರಕೆ, ಚಂದ್ರಹಾಸ ಶೆಟ್ಟಿ, ಅಭ್ಯರ್ಥಿ ಪದ್ಮರಾಜ್ ಜೊತೆಗೂ ವಾಗ್ವಾದ ನಡೆಸಿದ್ದಾರೆ. ಒಂದು ಹಂತದಲ್ಲಿ ನಾವು ಸಭೆಗೆ ಬರೋದಿಲ್ಲ ಎಂದು ಹೊರಗೆ ನಡೆದಿದ್ದಾರೆ. ಬಳಿಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅಸಮಾಧಾನಗೊಂಡ ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದ್ದಾರೆ.
ಈ ಬಗ್ಗೆ ಸುಳ್ಯ ಕಾಂಗ್ರೆಸಿನ ನಾಯಕರೊಬ್ಬರಲ್ಲಿ ಕೇಳಿದಾಗ, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ ಸುಳ್ಯ ಮತ್ತು ಕಡಬ ಬ್ಲಾಕ್ ಇದೆ. ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ಸಮಿತಿ ಮತ್ತು ಗ್ಯಾರಂಟಿ ಯೋಜನೆ ಸಮಿತಿ ಎರಡರಲ್ಲೂ ಮುಸ್ಲಿಮರನ್ನೇ ಅಧ್ಯಕ್ಷರಾಗಿ ಮಾಡಲಾಗಿದೆ. ಸುಳ್ಯದಲ್ಲಿ 24 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಈಗಲೇ ತಮ್ಮ ಓಟು ಪೂರ್ತಿ ಕಾಂಗ್ರೆಸಿಗೆ ಹಾಕುತ್ತೇವೆಂದು ಹೇಳಿ ಎಲ್ಲ ಪ್ರಮುಖ ಹುದ್ದೆಗಳನ್ನೂ ಕೇಳಿ ಪಡೆಯುತ್ತಿದ್ದಾರೆ. ಕಡಬದಲ್ಲಿ ಪ್ರತ್ಯೇಕವಾಗಿ ಪ್ರಚಾರ ಸಮಿತಿ ಮಾಡಿಲ್ಲ. ಸುಳ್ಯದ ಒಟ್ಟು ಮತದಾರರಲ್ಲಿ 70 ಶೇಕಡಾ ಒಕ್ಕಲಿಗರೇ ಇದ್ದಾರೆ. ಜಾತಿವಾರು ಕೇಳಿದರೆ, ಎಲ್ಲರಿಗೂ ಕೊಡಬೇಕಾದೀತು. ಇವರು ಇಷ್ಟೆಲ್ಲ ಕೊಟ್ಟರೂ ಪಕ್ಷದ ಪ್ರಚಾರ ಸಭೆಯಲ್ಲಿ ಅಪಸ್ವರ ಎತ್ತಿದ್ದಾರೆ ಎಂದು ಹೇಳಿದ್ದಾರೆ.
ಸಭೆಯಲ್ಲಿದ್ದ ಇನ್ನೊಬ್ಬರಲ್ಲಿ ಕೇಳಿದಾಗ, ಕಡಬ ಬ್ಲಾಕ್ ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ಪದಾಧಿಕಾರಿ ಹುದ್ದೆ ಕೊಟ್ಟಿಲ್ಲ ಅನ್ನುವುದು ಆವರ ಆಕ್ಷೇಪ ಆಗಿತ್ತು. ಇಲ್ಲಿಂದ ನಾವು ಕೆಲವರ ಹೆಸರನ್ನು ಕಳಿಸಿಕೊಟ್ಟಿದ್ದೆವು. ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಬೇರೆ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು ಎಂದಿದ್ದಾರೆ. ಬಳಿಕ ಜಿಲ್ಲಾಧ್ಯಕ್ಷರು ಮತ್ತು ವಿನಯ ಕುಮಾರ್ ಸೊರಕೆ ಅವರು, ನಿಮ್ಮಲ್ಲಿ ಒಬ್ಬರಿಗೆ ಎರಡೇ ದಿನದಲ್ಲಿ ಪ್ರಮುಖ ಹುದ್ದೆಯನ್ನು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮುಸ್ಲಿಂ ಮುಖಂಡರನ್ನು ಸಮಾಧಾನಪಡಿಸಿದ ಬಳಿಕ ಕಾರ್ಯಕರ್ತರ ಸಭೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಮಾತನಾಡಿ, ಈ ಭಾಗದ ಪ್ರಮುಖ ಬೆಳೆಯಾದ ಅಡಿಕೆ ಮತ್ತು ರಬ್ಬರ್ ಬೆಲೆಯ ವಿಚಾರದಲ್ಲಿ ಲೋಕಸಭೆಯಲ್ಲಿ ಧ್ವನಿ ಎತ್ತುತ್ತೇನೆ. ಅಲ್ಲದೆ, ಅಡಿಕೆ ಹಳದಿ ರೋಗದ ಬಗ್ಗೆ ಸಂಶೋಧನೆ ನಡೆಸಲು ಅಧ್ಯಯನ ಸಮಿತಿಯನ್ನು ರಚಿಸಲು ಕೇಂದ್ರ ಮಟ್ಟದಲ್ಲಿ ಒತ್ತಡ ತರುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಸದಸ್ಯ ಕೃಷ್ಣಪ್ಪ, ಸುಳ್ಯ ಬ್ಲಾಕ್ ಅಧ್ಯಕ್ಷ ಪಿಸಿ ಜಯರಾಮ್, ಕೆಪಿಸಿಸಿ ಸದಸ್ಯ ಡಾ.ರಘು, ಸುಳ್ಯ ಕ್ಷೇತ್ರದ ಚುನಾವಣಾ ವೀಕ್ಷಕ ಜಯಪ್ರಕಾಶ್ ರೈ, ಚುನಾವಣಾ ಉಸ್ತುವಾರಿ ಬಾಲಕೃಷ್ಣ ಬಳ್ಳೇರಿ, ಪ್ರಚಾರ ಸಮಿತಿ ಉಸ್ತುವಾರಿ ವೆಂಕಪ್ಪ ಗೌಡ, ಕಿರಣ್ ಬುಡ್ಲೆಗುತ್ತು ಮತ್ತಿತರರು ಇದ್ದರು.
Congress Muslim leaders fight erupts amid leaders in Kadaba office in Mangalore for not giving any post at congress party even after 24 thousand Muslims voters are in Kadaba
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
13-06-25 11:09 pm
HK News Desk
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
13-06-25 09:36 pm
Mangalore Correspondent
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm