ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm