ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am