ಬ್ರೇಕಿಂಗ್ ನ್ಯೂಸ್
02-04-24 11:18 am Mangalore Correspondent ಕರಾವಳಿ
ಬಂಟ್ವಾಳ, ಏ 2: ಮನೆಯ ಮೇಲಿಂದ ಕೆಳಗೆಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ಕಳೆದ ರಾತ್ರಿ ನಡೆದಿದೆ. ಬಂಟ್ವಾಳದ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್, ಮೃತ ಬಾಲಕ.
ಬಾಲಕನಿಗೆ ಮೊಬೈಲ್ ಗೀಳು ಇತ್ತು. ಯಾವಾಗಲೂ ಮೊಬೈಲ್ನಲ್ಲೇ ಮುಳುಗಿರುತ್ತಿದ್ದನಂತೆ. ರಾತ್ರಿ ವೇಳೆ ಮೊಬೈಲ್ ನೋಡುತ್ತ ಹೋಗುವಾಗ ಆಯತಪ್ಪಿ ಮನೆಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮೇಲೆ ಹೋಗಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಬಾಲಕನ ತಂದೆ ಬೆಳಗ್ಗೆ ಎದ್ದು ಹೊರಗೆ ಬಂದಾಗ ಆತ ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ಮನೆ ಮೇಲಿಂದ ಬಟ್ಟೆ ತೊಳೆಯುವ ಕಲ್ಲಿನ ಮೇಲೆ ಬಾಲಕ ಬಿದ್ದಿರುವುದು ಕಂಡುಬಂದಿದೆ.
ಬಾಲಕನಿಗೆ ರಾತ್ರಿ ವೇಳೆಯೂ ಮೊಬೈಲ್ ಬಳಕೆ ಹಾಗೂ ಟಿವಿ ನೋಡುವ ಅಭ್ಯಾಸ ಇತ್ತು. ಮನೆ ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಪಿಲ್ಲರ್ ಹಾಕಿ ಮೇಲೆ ಮನೆ ನಿರ್ಮಿಸಿದ್ದರು.
ಬಾಲಕನ ತಂದೆ ದಿನೇಶ್ ಹೋಟೆಲ್ ನಡೆಸುತ್ತಿದ್ದು, ಅವರ ಪತ್ನಿ ಬೆಳಗ್ಗೆ ಹೋಟೆಲ್ನಲ್ಲಿ ಕೆಲಸವಿದೆ ಎಂದು ಅಲ್ಲೇ ಮಲಗಿದ್ದರು. ಬಾಲ್ಯದಿಂದಲೂ ಒಬ್ಬನೇ ಮಲಗುವ ಅಭ್ಯಾಸವಿದ್ದ ಬಾಲಕ, ರಾತ್ರಿ ವೇಳೆ ಎದ್ದರೂ ತಂದೆ, ತಾಯಿ ಗಮನಕ್ಕೆ ಬರುತ್ತಿರಲಿಲ್ಲ. ಬಂಟ್ವಾಳ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಆದಿಶ್ಗೆ ಇತ್ತೀಚಿಗಷ್ಟೇ ಪರೀಕ್ಷೆಗಳು ಮುಗಿದಿದ್ದವು.
ನಮ್ಮ ಮಗ ಯಾವಾಗಲೂ ಮೊಬೈಲ್ಅನ್ನು ಹಿಡಿದುಕೊಂಡೇ ಇರುತ್ತಿದ್ದ. ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದನೇ ಅಥವಾ ಏನನ್ನು ನೋಡುತ್ತಿದ್ದ ಎಂಬುದು ಗೊತ್ತಿಲ್ಲ ಎಂದು ಹೆತ್ತವರು ತಿಳಿಸಿದ್ದಾರೆ.
15 year old boy falls from house top and dies while using mobile at Bantwal in Mangalore. The deceased has been identified as Adish. It is said he was highly addicted to mobile phone.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm