ಬ್ರೇಕಿಂಗ್ ನ್ಯೂಸ್
03-04-24 04:25 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರು ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮೊದಲಿಗೆ ಶರವು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಕುದ್ರೋಳಿಯಿಂದ ಮೆರವಣಿಗೆ ಆರಂಭಿಸಿದರು. ನಾಮಪತ್ರ ಸಲ್ಲಿಕೆಯ ಮೆರವಣಿಗೆಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ರಮಾನಾಥ ರೈ ಸೇರಿದಂತೆ ಮಂಗಳೂರಿನ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.




ಕಲ್ಲಡ್ಕದ ಗೊಂಬೆಯಾಟ, ಚೆಂಡೆ ವಾದನ, ಹುಲಿ ವೇಷ, ಕೊಂಬು, ಕಹಳೆಗಳ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಕುದ್ರೋಳಿಯಿಂದ ರಥಬೀದಿಯಾಗಿ ಹಂಪನಕಟ್ಟೆ, ಕ್ಲಾಕ್ ಟವರ್, ಸ್ಟೇಟ್ ಬ್ಯಾಂಕ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ತೆರೆದ ವಾಹನದಲ್ಲಿ ನಿಂತುಕೊಂಡೇ ಅಭ್ಯರ್ಥಿ ಪದ್ಮರಾಜ್ ಕೈಬೀಸುತ್ತಾ ಸಾಗಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ, ಲೋಕಸಭೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ರೈ, ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



ಕಪ್ಪು ಚುಕ್ಕೆಯಿಂದಾಗಿ ಹೂಡಿಕೆ ಬರುತ್ತಿಲ್ಲ
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪದ್ಮರಾಜ್, ಕಳೆದ 33 ವರ್ಷಗಳಿಂದ ಈ ಜಿಲ್ಲೆಯ ಮೇಲೆ ಕೋಮು ಸೂಕ್ಷ್ಮ ಪ್ರದೇಶ ಎಂಬ ಕಪ್ಪು ಚುಕ್ಕೆ ಬಿದ್ದಿದೆ. ವಿಶಿಷ್ಟ ಸಂಸ್ಕೃತಿಯ ಜಿಲ್ಲೆಯಲ್ಲಿ ಬಿಜೆಪಿ ಆಡಳಿತದಲ್ಲಿ ಕೋಮು ಸಾಮರಸ್ಯ ಕದಡಿದ್ದು ದೊಡ್ಡ ಹಿನ್ನಡೆಯಾಗಿದೆ. ಅದನ್ನು ನಿವಾರಿಸುವುದೇ ನಮ್ಮ ಉದ್ದೇಶ. ಜಾತಿ ಧರ್ಮ ಮೀರಿದ ಬಾಂಧವ್ಯ ಮಾಯವಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಜನರು ಇದರ ಬಗ್ಗೆ ಅರಿವು ಮೂಡಿಸಿಕೊಂಡಿದ್ದು ಬದಲಾವಣೆ ಬಯಸಿದ್ದಾರೆ. ನಿರುದ್ಯೋಗ ಹೆಚ್ಚಳದಿಂದಾಗಿ ಜನರು ಕಾಂಗ್ರೆಸಿನತ್ತ ವಾಲಿದ್ದು, ಮತವಾಗಿ ಪರಿವರ್ತನೆಯಾಗಲಿದೆ.
ರಾಜ್ಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳಿಂದ ಗೃಹಿಣಿಯ ಮುಖದಲ್ಲಿ ನಗು ಮೂಡಿಸಿದೆ. ಬಡ ಕುಟುಂಬಗಳಿಗೆ ಶಕ್ತಿ ನೀಡಿದೆ. ನಾವು ಯಾರ ಬಗ್ಗೆಯೂ ದ್ವೇಷ ಮಾಡುವುದಿಲ್ಲ. ಟೀಕೆಯನ್ನೂ ಮಾಡುವುದಿಲ್ಲ. ವಾಸ್ತವ ಏನಿದೆಯೋ ಅದನ್ನು ಜನರ ಮುಂದಿಡುತ್ತೇನೆ. ಜಾತಿ ರಾಜಕಾರಣ ಮಾಡುವುದಿಲ್ಲ. ಜನರ ಸ್ಪಂದನೆ ಉತ್ತಮವಾಗಿದ್ದು, ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
Dakshina Kannada (DK) Congress MP candidate Padmaraj R filed his nomination at the DC’s office on Wednesday, April 3, for the upcoming Lok Sabha (LS) elections.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm