ಬ್ರೇಕಿಂಗ್ ನ್ಯೂಸ್
03-04-24 06:02 pm Bangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಹಿಂದುತ್ವದ ಭದ್ರಕೋಟೆ ಎಂಬ ಪ್ರಶ್ನೆಗೆ, ಹಿಂದೆ ರಾಜರು ಕಟ್ಟಿದ ಕೋಟೆಗಳೇ ಉಳಿದಿಲ್ಲ. ಪುಡಿಯಾಗಿ ಹೋಗಿವೆ. ಮಹಾರಾಷ್ಟ್ರದಲ್ಲಿ ಸಾವರ್ಕರ್ ಕಟ್ಟಿದ ಹಿಂದುತ್ವದ ಕೋಟೆಯೂ ಉಳಿದಿಲ್ಲ. ಇದೆಲ್ಲ ಯಾವ ಲೆಕ್ಕ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಅವರಲ್ಲಿ ಮಾಧ್ಯಮದವರು ಪ್ರಶ್ನೆ ಇಟ್ಟಾಗ, ಹಿಂದೆ ಸಾವರ್ಕರ್ ಮಹಾರಾಷ್ಟ್ರದಲ್ಲಿ ಹಿಂದುತ್ವದ ಕೋಟೆ ಅಂತ ಮಾಡಿದ್ದರು. ಆ ಕೋಟೆಯೇ ಉಳಿದುಕೊಂಡಿಲ್ಲ. ಇವರು ಹಣ ಕೊಟ್ಟು ಕೋಟೆಗಳನ್ನು ಖರೀದಿಸಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರಣಾಂತರಗಳಿಂದ ಬಿಜೆಪಿ ಗೆದ್ದಿದೆ. ಅದಕ್ಕೆ ಹಿಂದುತ್ವದ ಕೋಟೆ ಕಾರಣವಲ್ಲ. ಇದ್ಯಾವುದೇ ಕೋಟೆಗಳೂ ಉಳಿಯೋದಿಲ್ಲ ಎಂದು ಹೇಳಿದರು.
ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದಾರೆಂದು ಅಮಿತ್ ಷಾ ಟೀಕಿಸಿದ್ದನ್ನು ಕೇಳಿದಾಗ, ಹಿಂದೆ ಇಂದಿರಾ ಗಾಂಧಿ ಕಾಲದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ವಿಭಜನೆಯಾಗಿತ್ತು. ಅದು ಬಿಟ್ಟರೆ ಯಾರೋ ಹೇಳಿಕೆ ನೀಡಿದರೆ ದೇಶ ವಿಭಜನೆ ಆಗುತ್ತಾ.. ಹಿಂದೆ ಸಿಕ್ಕಿಂ ಸ್ವತಂತ್ರ ದೇಶವಾಗಿದ್ದುದನ್ನು ನಮ್ಮ ದೇಶದಲ್ಲಿ ರಾಜ್ಯವಾಗಿಸಿ ಜೋಡಿಸಿದ್ದು ಇಂದಿರಾ ಗಾಂಧಿ. ಈಗಲೂ ಆಡಳಿತದಲ್ಲಿರುವ ಸರಕಾರಕ್ಕೆ ದೇಶವನ್ನು ಉಳಿಸುವ ಜವಾಬ್ದಾರಿ ಇರುತ್ತದೆ.
ಮೋದಿಯವರು ಈಗ ಕಛ್ ದೀವು ದ್ವೀಪವನ್ನು ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಇವರ ಆರೆಸ್ಸೆಸ್, ಬಿಜೆಪಿಯವರು ಹೇಳಿದಂತೆ ಚೀನಾ ಎರಡು ಸಾವಿರ ಚದರ ಕಿಲೋ ಮೀಟರ್ ಜಾಗವನ್ನು ಅತಿಕ್ರಮಿಸಿದೆ. ಈ ವಿಚಾರ ನಾವು ಹೇಳಿದ್ದಲ್ಲ. ಅವರದೇ ಸದಸ್ಯರು ಹೇಳಿದ್ದಾರೆ. ಆ ಭೂಮಿಯನ್ನು ಯಾವಾಗ ಮರಳಿ ಕಿತ್ತುಕೊಳ್ಳುತ್ತಾರೆಂದು ಹೇಳಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.
B K Hariprasad slams about Hindutva in Mangalore, says we have destroyed Savarkar, Mangalore Hindutva is nothing before us he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm