ಬ್ರೇಕಿಂಗ್ ನ್ಯೂಸ್
03-04-24 07:04 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಎ.4ರಂದು ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವಾಗಲೇ ಮೀನುಗಾರ ಮಹಿಳೆಯರು, ಹೂವು ಮಾರುವ ಮಹಿಳೆಯರು ಬಿಜೆಪಿ ಕಚೇರಿಗೆ ಬಂದು ವಿಶೇಷ ರೀತಿಯಲ್ಲಿ ಹಾರೈಕೆ ಮಾಡಿದ್ದಾರೆ.
ಬಂಟ್ಸ್ ಹಾಸ್ಟೆಲಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬಡ ಮೀನುಗಾರ ಮಹಿಳೆಯರು, ಹೂವು ಮಾರುವ ಮಹಿಳೆಯರು ಮತ್ತು ಬೀದಿ ನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿ ಮತ್ತಿತರರು ಸೇರಿ ಬೃಜೇಶ್ ಚೌಟ ಅವರಿಗೆ ಆರತಿ ಎತ್ತಿ ಹಣೆಗೆ ಕುಂಕುಮ ಇಟ್ಟು ಆಶೀರ್ವಾದ ಮಾಡಿದ್ದಾರೆ. ಅಲ್ಲದೆ, ತಾವೇ ದುಡಿದು ಸಂಗ್ರಹಿಸಿದ ಇಡುಗಂಟನ್ನು ಅಭ್ಯರ್ಥಿಗೆ ನೀಡಿದ್ದು ಇದೇ ಹಣವನ್ನು ನಾಮಪತ್ರ ಸಲ್ಲಿಕೆಗೆ ಬಳಸುವಂತೆ ಹೇಳಿದ್ದಾರೆ. ಹತ್ತು ಮಂದಿ ಬಡ ಮಹಿಳೆಯರು ತಾವು ದುಡಿದಿಟ್ಟ ಹಣವನ್ನು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸೈನಿಕನ ಚುನಾವಣಾ ಠೇವಣಿಯೆಂದು ನೀಡಿದ್ದು ವಿಶೇಷ.
ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ.ಬೃಜೇಶ್ ಚೌಟ, ಇಂದು ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯತಿಥಿ. ಶಿವಾಜಿ ಮಹಾರಾಜರ ಪ್ರೇರಣೆಯಂತೆ ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ನೀಡಿದ್ದಾರೆ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಇಂದು ಮಾತೆಯರು ಆಶೀರ್ವಾದ ಮಾಡುವ ಮೂಲಕ ನಾರೀ ಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ಸಮಾಜ ಸೇವಕಿ ರಜನಿ ಶೆಟ್ಟಿ, ಯೋಧನಾಗಿ ದೇಶ ಸೇವೆ ಮಾಡಿದ್ದ ಬೃಜೇಶ್ ಚೌಟರನ್ನು ಭಾರತ ಮಾತೆ ತನ್ನ ಸೇವೆಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈಗ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಸಂಸದರನ್ನಾಗಿಸಬೇಕು. ಈ ಕಾರಣಕ್ಕೆ ನಾವು ದುಡಿದ ಹಣವನ್ನು ದೇಣಿಗೆಯಾಗಿ ನೀಡಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಪಕ್ಷದ ಕೋಶಾಧಿಕಾರಿ ಸಂಜಯ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಹಿರಿಯ ನಾಯಕರಾದ ಜಗದೀಶ ಶೇಣವ ಉಪಸ್ಥಿತರಿದ್ದರು.
ಚೌಟ ದಕ್ಕೆಗೆ ಹೋದ ವಿಡಿಯೋ ವೈರಲ್
ಎರಡು ದಿನಗಳ ಹಿಂದೆ ಮಂಗಳೂರಿನ ಮೀನುಗಾರಿಕಾ ದಕ್ಕೆಗೆ ತೆರಳಿದ್ದ ಬೃಜೇಶ್ ಚೌಟ ಅವರು ಮೀನುಗಾರ ಮಹಿಳೆಯರು, ಅಲ್ಲಿನ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮೀನುಗಾರಿಕೆಯಲ್ಲಿ ತೊಡಗಿದ್ದ ಇತರ ಕಾರ್ಮಿಕರನ್ನೂ ಕಂಡು ಮಾತನಾಡಿಸಿದ್ದರು. ಹಲವರು ಚೌಟರ ಜೊತೆಗೆ ನಿಂತು ಸೆಲ್ಫಿ ಫೋಟೊ ಕ್ಲಿಕ್ಕಿಸಿದ್ದರೆ, ಕೆಲವು ಹಿರಿಯ ಮಹಿಳೆಯರು ಆತ್ಮೀಯವಾಗಿ ಅಪ್ಪಿಕೊಂಡು ಹರಸಿದ್ದರು. ಇದರ ವಿಡಿಯೋ ಭಾರೀ ವೈರಲ್ ಆಗಿತ್ತು.
Fishermen women take arati at Brijesh Chowta at BJP office in Mangalore ae he will be filing his nomination on april 4th.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 08:54 pm
HK News Desk
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm