ಬ್ರೇಕಿಂಗ್ ನ್ಯೂಸ್
03-04-24 07:04 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಎ.4ರಂದು ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವಾಗಲೇ ಮೀನುಗಾರ ಮಹಿಳೆಯರು, ಹೂವು ಮಾರುವ ಮಹಿಳೆಯರು ಬಿಜೆಪಿ ಕಚೇರಿಗೆ ಬಂದು ವಿಶೇಷ ರೀತಿಯಲ್ಲಿ ಹಾರೈಕೆ ಮಾಡಿದ್ದಾರೆ.
ಬಂಟ್ಸ್ ಹಾಸ್ಟೆಲಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬಡ ಮೀನುಗಾರ ಮಹಿಳೆಯರು, ಹೂವು ಮಾರುವ ಮಹಿಳೆಯರು ಮತ್ತು ಬೀದಿ ನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿ ಮತ್ತಿತರರು ಸೇರಿ ಬೃಜೇಶ್ ಚೌಟ ಅವರಿಗೆ ಆರತಿ ಎತ್ತಿ ಹಣೆಗೆ ಕುಂಕುಮ ಇಟ್ಟು ಆಶೀರ್ವಾದ ಮಾಡಿದ್ದಾರೆ. ಅಲ್ಲದೆ, ತಾವೇ ದುಡಿದು ಸಂಗ್ರಹಿಸಿದ ಇಡುಗಂಟನ್ನು ಅಭ್ಯರ್ಥಿಗೆ ನೀಡಿದ್ದು ಇದೇ ಹಣವನ್ನು ನಾಮಪತ್ರ ಸಲ್ಲಿಕೆಗೆ ಬಳಸುವಂತೆ ಹೇಳಿದ್ದಾರೆ. ಹತ್ತು ಮಂದಿ ಬಡ ಮಹಿಳೆಯರು ತಾವು ದುಡಿದಿಟ್ಟ ಹಣವನ್ನು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸೈನಿಕನ ಚುನಾವಣಾ ಠೇವಣಿಯೆಂದು ನೀಡಿದ್ದು ವಿಶೇಷ.


ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ.ಬೃಜೇಶ್ ಚೌಟ, ಇಂದು ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯತಿಥಿ. ಶಿವಾಜಿ ಮಹಾರಾಜರ ಪ್ರೇರಣೆಯಂತೆ ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ನೀಡಿದ್ದಾರೆ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಇಂದು ಮಾತೆಯರು ಆಶೀರ್ವಾದ ಮಾಡುವ ಮೂಲಕ ನಾರೀ ಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ಸಮಾಜ ಸೇವಕಿ ರಜನಿ ಶೆಟ್ಟಿ, ಯೋಧನಾಗಿ ದೇಶ ಸೇವೆ ಮಾಡಿದ್ದ ಬೃಜೇಶ್ ಚೌಟರನ್ನು ಭಾರತ ಮಾತೆ ತನ್ನ ಸೇವೆಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈಗ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಸಂಸದರನ್ನಾಗಿಸಬೇಕು. ಈ ಕಾರಣಕ್ಕೆ ನಾವು ದುಡಿದ ಹಣವನ್ನು ದೇಣಿಗೆಯಾಗಿ ನೀಡಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಪಕ್ಷದ ಕೋಶಾಧಿಕಾರಿ ಸಂಜಯ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಹಿರಿಯ ನಾಯಕರಾದ ಜಗದೀಶ ಶೇಣವ ಉಪಸ್ಥಿತರಿದ್ದರು.


ಚೌಟ ದಕ್ಕೆಗೆ ಹೋದ ವಿಡಿಯೋ ವೈರಲ್
ಎರಡು ದಿನಗಳ ಹಿಂದೆ ಮಂಗಳೂರಿನ ಮೀನುಗಾರಿಕಾ ದಕ್ಕೆಗೆ ತೆರಳಿದ್ದ ಬೃಜೇಶ್ ಚೌಟ ಅವರು ಮೀನುಗಾರ ಮಹಿಳೆಯರು, ಅಲ್ಲಿನ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮೀನುಗಾರಿಕೆಯಲ್ಲಿ ತೊಡಗಿದ್ದ ಇತರ ಕಾರ್ಮಿಕರನ್ನೂ ಕಂಡು ಮಾತನಾಡಿಸಿದ್ದರು. ಹಲವರು ಚೌಟರ ಜೊತೆಗೆ ನಿಂತು ಸೆಲ್ಫಿ ಫೋಟೊ ಕ್ಲಿಕ್ಕಿಸಿದ್ದರೆ, ಕೆಲವು ಹಿರಿಯ ಮಹಿಳೆಯರು ಆತ್ಮೀಯವಾಗಿ ಅಪ್ಪಿಕೊಂಡು ಹರಸಿದ್ದರು. ಇದರ ವಿಡಿಯೋ ಭಾರೀ ವೈರಲ್ ಆಗಿತ್ತು.
Fishermen women take arati at Brijesh Chowta at BJP office in Mangalore ae he will be filing his nomination on april 4th.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm