ಬ್ರೇಕಿಂಗ್ ನ್ಯೂಸ್
06-04-24 04:14 pm Mangalore Correspondent ಕರಾವಳಿ
ಮಂಗಳೂರು, ಎ.6: ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಅವರನ್ನು ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ಆಗಬಾರದೆಂದು ಮೈಸೂರಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪ ವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಭರತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ.
ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲು ಬಜರಂಗದಳ ಜಿಲ್ಲಾ ಸಂಯೋಜಕ ಜವಾಬ್ದಾರಿಯಲ್ಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಹೊಂದಿದ್ದು ವೆಹಿಕಲ್ ಸೀಝರ್ ಇನ್ನಿತರ ಕೆಲಸ ಮಾಡಿಕೊಂಡಿದ್ದಾರೆ. ಬಜರಂಗದಳ ಕಾರ್ಯಕರ್ತನಾಗಿದ್ದು ತನ್ನ ಸಹಚರರೊಂದಿಗೆ ಸೇರಿ ಫರಂಗಿಪೇಟೆ, ಕಡೆಗೋಳಿ, ಬಿಸಿರೋಡ್ ಹಾಗೂ ಬಂಟ್ವಾಳ ಪರಿಸರದಲ್ಲಿ ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ಗಲಭೆ ಇತ್ಯಾದಿಗಳನ್ನು ನಡೆಸಿ ಸಾರ್ವಜನಿಕ ಶಾಂತಿಭಂಗ ಕೃತ್ಯಗಳಲ್ಲಿ ತೊಡಗಿದ್ದು ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟುಮಾಡುವ ಪ್ರವೃತ್ತಿಯವರು ಎಂದು ಪೊಲೀಸರು ವರದಿ ನೀಡಿದ್ದರು.
ಇದರಂತೆ, ಪೊಲೀಸ್ ಕಾಯ್ದೆ ಕಲಂ 55(ಬಿ)ಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮಂಗಳೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)ಮತ್ತು 55(ಬಿ) ಅಡಿಯಲ್ಲಿ ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಭರತ್ ಕುಮ್ಡೇಲು ಪರವಾಗಿ ಹೈಕೋರ್ಟಿನಲ್ಲಿ ಅರುಣ್ಶ್ಯಾಮ್ ಹಾಗೂ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.
Mangalore Bharath Kumdel from Bajrang Dal exile notice, court brings stay.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm