ಬ್ರೇಕಿಂಗ್ ನ್ಯೂಸ್
06-04-24 04:14 pm Mangalore Correspondent ಕರಾವಳಿ
ಮಂಗಳೂರು, ಎ.6: ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಅವರನ್ನು ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ಆಗಬಾರದೆಂದು ಮೈಸೂರಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪ ವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಭರತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ.
ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲು ಬಜರಂಗದಳ ಜಿಲ್ಲಾ ಸಂಯೋಜಕ ಜವಾಬ್ದಾರಿಯಲ್ಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಹೊಂದಿದ್ದು ವೆಹಿಕಲ್ ಸೀಝರ್ ಇನ್ನಿತರ ಕೆಲಸ ಮಾಡಿಕೊಂಡಿದ್ದಾರೆ. ಬಜರಂಗದಳ ಕಾರ್ಯಕರ್ತನಾಗಿದ್ದು ತನ್ನ ಸಹಚರರೊಂದಿಗೆ ಸೇರಿ ಫರಂಗಿಪೇಟೆ, ಕಡೆಗೋಳಿ, ಬಿಸಿರೋಡ್ ಹಾಗೂ ಬಂಟ್ವಾಳ ಪರಿಸರದಲ್ಲಿ ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ಗಲಭೆ ಇತ್ಯಾದಿಗಳನ್ನು ನಡೆಸಿ ಸಾರ್ವಜನಿಕ ಶಾಂತಿಭಂಗ ಕೃತ್ಯಗಳಲ್ಲಿ ತೊಡಗಿದ್ದು ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟುಮಾಡುವ ಪ್ರವೃತ್ತಿಯವರು ಎಂದು ಪೊಲೀಸರು ವರದಿ ನೀಡಿದ್ದರು.
ಇದರಂತೆ, ಪೊಲೀಸ್ ಕಾಯ್ದೆ ಕಲಂ 55(ಬಿ)ಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮಂಗಳೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)ಮತ್ತು 55(ಬಿ) ಅಡಿಯಲ್ಲಿ ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಭರತ್ ಕುಮ್ಡೇಲು ಪರವಾಗಿ ಹೈಕೋರ್ಟಿನಲ್ಲಿ ಅರುಣ್ಶ್ಯಾಮ್ ಹಾಗೂ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.
Mangalore Bharath Kumdel from Bajrang Dal exile notice, court brings stay.
10-01-26 01:17 pm
Bangalore Correspondent
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm